ಸಂಗ್ರಹ ಚಿತ್ರ 
ದೇಶ

ಪಾಕ್ ನಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅಖ್ನೂರ್ ಸೆಕ್ಟರ್ ಗಳ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ಮಳೆಗರೆಯುತ್ತಿದೆ. ಇತ್ತ ಕೃಷ್ಣ ಘಾಟಿಯಲ್ಲಿ ಪಾಕಿಸ್ತಾನ  ಸೇನೆಯ ಗುಂಡಿಗೆ ಭಾರತೀಯ ಯೋಧ ಮಂದೀಪ್ ಸಿಂಗ್ ಹುತಾತ್ಮರಾಗಿದ್ದು,  ನಿನ್ನೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, 11 ಮಂದಿ  ನಾಗರಿಕರು ಗಾಯಗೊಂಡಿದ್ದಾರೆ.
ಸುದ್ದಿಸಂಸ್ಥೆಯ ಪ್ರಕಾರ 23 ವರ್ಷದ ಸೆಪೋಯ್ ಮನ್ ದೀಪ್ ಸಿಂಗ್ ಅವರು ಪಾಕಿಸ್ತಾನಿ ರೇಂಜರ್ಸ್ ಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಪ್ರಮುಖವಾಗಿ ಪಾಕಿಸ್ತಾನಿ ರೇಂಜರ್ಸ್ ಗಳು ಭಾರತೀಯ ಗಡಿ ಗ್ರಾಮಗಳನ್ನು  ಗುರಿಯಾಗಿಸಿಕೊಂಡು ಸತತ ಗುಂಡಿನ ದಾಳಿ ನಡೆಸುತ್ತಿದ್ದು, ಚಿನಾಬ್ ನದಿ ದಡದಲ್ಲಿರುವ ಗ್ರಾಮ ಮತ್ತು ಐಬಿ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪರಿಣಾಮ ಸುತ್ತಮುತ್ತಲಿನ ಹಲವು ಗ್ರಾಮಗಳು ಗುಂಡಿನ ದಾಳಿಗೆ  ತುತ್ತಾಗಿದ್ದು, ಈ ವರೆಗೂ ಭಾರತೀಯ ಸೇನೆ ಸುಮಾರು 8 ಸಾವಿರದಿಂದ 9 ಸಾವಿರ ಗ್ರಾಮಸ್ಥರನ್ನು ಸ್ಥಳಾಂತರ ಮಾಡಿದೆ ಎಂದು ತಿಳಿದುಬಂದಿದೆ. ಈ ಪೈಕಿ ಆರ್ ಎಸ್ ಪುರ ಸೆಕ್ಟರ್ ನಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಸುಮಾರು 1  ಸಾವಿರ ಮಂದಿಗೆ ಆಶ್ರಯ ಕಲ್ಪಿಸಲಾಗಿದ್ದು, ಉಳಿದವರಿಗೆ ಇತರೆ ಪ್ರದೇಶಗಳಲ್ಲಿ ಕ್ಯಾಂಪ್ ನಿರ್ಮಿಸಲಾಗಿದೆ.
ಗಡಿಯಲ್ಲಿನ ಪ್ರಕ್ಷುಬ್ಧ ವಾತಾವರಣದಿಂದಾಗಿ ಈಗಾಗಲೇ ಸ್ಥಳೀಯ ಜಿಲ್ಲಾಡಳಿತ ಎಲ್ಲ ರೀತಿಯ ಶೈಕ್ಷಣಿಕ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಂತೆಯೇ ಗಡಿ ಗ್ರಾಮಸ್ಥರು ಸುರಕ್ಷಿತ ಪ್ರದೇಶಗಳಿಗೆ  ತೆರಳುವಂತೆಯೂ ಸೂಚನೆ ನೀಡಲಾಗಿದೆ.
ಒಟ್ಟಾರೆ ಪಾಕಿಸ್ತಾನದ ದುರ್ವರ್ತನೆಯಿಂದಾಗಿ ಗಡಿ ಗ್ರಾಮದಲ್ಲಿ ಅಶಾಂತಿ ಮತ್ತು ಭಯದ ವಾತಾವರಣ ನೆಲೆಸುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT