ಸಂಗ್ರಹ ಚಿತ್ರ 
ದೇಶ

ಪಾಕ್ ನಿಂದ ಪದೇ ಪದೇ ಕದನ ವಿರಾಮ ಉಲ್ಲಂಘನೆ, ಭಾರತೀಯ ಯೋಧ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ಸೈನಿಕರ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಹಾಗೂ ಅಖ್ನೂರ್ ಸೆಕ್ಟರ್ ಗಳ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕ್ ಸೇನೆ ಕದನ ವಿರಾಮವನ್ನು ಉಲ್ಲಂಘಿಸಿ ಗುಂಡಿನ ಮಳೆಗರೆಯುತ್ತಿದೆ. ಇತ್ತ ಕೃಷ್ಣ ಘಾಟಿಯಲ್ಲಿ ಪಾಕಿಸ್ತಾನ  ಸೇನೆಯ ಗುಂಡಿಗೆ ಭಾರತೀಯ ಯೋಧ ಮಂದೀಪ್ ಸಿಂಗ್ ಹುತಾತ್ಮರಾಗಿದ್ದು,  ನಿನ್ನೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಿಂದ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದು, 11 ಮಂದಿ  ನಾಗರಿಕರು ಗಾಯಗೊಂಡಿದ್ದಾರೆ.
ಸುದ್ದಿಸಂಸ್ಥೆಯ ಪ್ರಕಾರ 23 ವರ್ಷದ ಸೆಪೋಯ್ ಮನ್ ದೀಪ್ ಸಿಂಗ್ ಅವರು ಪಾಕಿಸ್ತಾನಿ ರೇಂಜರ್ಸ್ ಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಪ್ರಮುಖವಾಗಿ ಪಾಕಿಸ್ತಾನಿ ರೇಂಜರ್ಸ್ ಗಳು ಭಾರತೀಯ ಗಡಿ ಗ್ರಾಮಗಳನ್ನು  ಗುರಿಯಾಗಿಸಿಕೊಂಡು ಸತತ ಗುಂಡಿನ ದಾಳಿ ನಡೆಸುತ್ತಿದ್ದು, ಚಿನಾಬ್ ನದಿ ದಡದಲ್ಲಿರುವ ಗ್ರಾಮ ಮತ್ತು ಐಬಿ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪರಿಣಾಮ ಸುತ್ತಮುತ್ತಲಿನ ಹಲವು ಗ್ರಾಮಗಳು ಗುಂಡಿನ ದಾಳಿಗೆ  ತುತ್ತಾಗಿದ್ದು, ಈ ವರೆಗೂ ಭಾರತೀಯ ಸೇನೆ ಸುಮಾರು 8 ಸಾವಿರದಿಂದ 9 ಸಾವಿರ ಗ್ರಾಮಸ್ಥರನ್ನು ಸ್ಥಳಾಂತರ ಮಾಡಿದೆ ಎಂದು ತಿಳಿದುಬಂದಿದೆ. ಈ ಪೈಕಿ ಆರ್ ಎಸ್ ಪುರ ಸೆಕ್ಟರ್ ನಲ್ಲಿರುವ ಸೇನಾ ಕ್ಯಾಂಪ್ ನಲ್ಲಿ ಸುಮಾರು 1  ಸಾವಿರ ಮಂದಿಗೆ ಆಶ್ರಯ ಕಲ್ಪಿಸಲಾಗಿದ್ದು, ಉಳಿದವರಿಗೆ ಇತರೆ ಪ್ರದೇಶಗಳಲ್ಲಿ ಕ್ಯಾಂಪ್ ನಿರ್ಮಿಸಲಾಗಿದೆ.
ಗಡಿಯಲ್ಲಿನ ಪ್ರಕ್ಷುಬ್ಧ ವಾತಾವರಣದಿಂದಾಗಿ ಈಗಾಗಲೇ ಸ್ಥಳೀಯ ಜಿಲ್ಲಾಡಳಿತ ಎಲ್ಲ ರೀತಿಯ ಶೈಕ್ಷಣಿಕ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಂತೆಯೇ ಗಡಿ ಗ್ರಾಮಸ್ಥರು ಸುರಕ್ಷಿತ ಪ್ರದೇಶಗಳಿಗೆ  ತೆರಳುವಂತೆಯೂ ಸೂಚನೆ ನೀಡಲಾಗಿದೆ.
ಒಟ್ಟಾರೆ ಪಾಕಿಸ್ತಾನದ ದುರ್ವರ್ತನೆಯಿಂದಾಗಿ ಗಡಿ ಗ್ರಾಮದಲ್ಲಿ ಅಶಾಂತಿ ಮತ್ತು ಭಯದ ವಾತಾವರಣ ನೆಲೆಸುವಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT