ಅಪಘಾತದಿಂದ ತೀವ್ರ ರಕ್ತಸ್ರಾವಗೊಂಡು ಸಹಾಯಕ್ಕಾಗಿ ಅಂಗಲಾಚಿದ್ದರೂ ಸ್ಪಂದಿಸದ ಪೊಲೀಸರು 
ದೇಶ

ಅಪಘಾತಕ್ಕೀಡಾದವರಿಗೆ ಸಹಾಯ ಮಾಡದ ಆರಕ್ಷಕರು: ಯುವಕರಿಬ್ಬರು ಸಾವು

ಅಪಘಾತದಿಂದ ತೀವ್ರ ರಕ್ತ ಸ್ರಾವವಾಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಯುವಕರು , ಸಹಾಯಕ್ಕಾಗಿ ಅಂಗಲಾಚಿದ್ದರೂ ಪೆಟ್ರೋಲ್ ಕಾರಿನ ಸೀಟಿನ ಮೇಲೆ ರಕ್ತ ಬೀಳುತ್ತೆ ಅಂತಾ ಪೊಲೀಸರು ಸಹಾಯ ಮಾಡಿಲ್ಲ

ಶಹರಾನ್ ಪುರ;ಉತ್ತರ ಪ್ರದೇಶದ ಶಹರಾನ್ ಪುರದಲ್ಲಿ ಸಮಾಜ ರಕ್ಷಿಸುವ ಪೊಲೀಸರು ಹೃದಯ ಹೀನರಂತೆ ವರ್ತಿಸಿದ್ದಾರೆ. ಅಪಘಾತದಿಂದ ತೀವ್ರ ರಕ್ತ ಸ್ರಾವವಾಗಿ ರಸ್ತೆ ಮೇಲೆ ಬಿದ್ದಿದ್ದ ಇಬ್ಬರು ಯುವಕರು , ಸಹಾಯಕ್ಕಾಗಿ ಅಂಗಲಾಚಿದ್ದರೂ ಕಲ್ಲು ಹೃದಯದ ಪೊಲೀಸರು ನೆರವು ನೀಡಿಲ್ಲ. ಪೆಟ್ರೋಲ್ ಕಾರಿನ ಸೀಟಿನ ಮೇಲೆ ರಕ್ತ ಬೀಳುತ್ತೆ ಅಂತಾ ಕಾಲಹರಣ ಮಾಡಿದ್ದಾರೆ. ಇದರಿಂದಾಗಿ ಆ ಯುವಕರು ಸರಿಯಾದ ವೇಳೆಗೆ ಚಿಕಿತ್ಸೆ ಸಿಗದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

 ಅರ್ಪಿತ್ ಖುರಾನ ಮತ್ತು ಸನ್ನಿ ಜಾರ್ಜ್ ಮತಪಟ್ಟು ದುರ್ದೈವಿಗಳು. ಇವರು ಚಲಾಯಿಸುತ್ತಿದ್ದ ಮೊಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ನೆರವು ನೀಡಿದ್ದು, ಪೊಲೀಸರ ಸಹಾಯಕ್ಕಾಗಿ ಪೋನ್ ಮಾಡಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಮೂರು ಪೊಲೀಸರು , ಅಪಘಾತದಿಂದ ನರಳುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸೇರಿಸದೆ ಅವರ ಸಾವಿಗೆ ಕಾರಣರಾಗಿದ್ದಾರೆ.

ಇದನ್ನು ನೋಡಿದ ಪ್ರತ್ಯೇಕ್ಷದರ್ಶಿಗಳು ಪೊಲೀಸರ ವರ್ತನೆಯನ್ನು ತಮ್ಮ ಮೊಬೈಲ್ ಮೂಲಕ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಸ್ಥಳದಲ್ಲಿ ಯಾವುದೇ ಕಾರಿಲ್ಲ.  ಆಸ್ಪತ್ರೆಗೆ ಸೇರಿಸಿ ಅಂತಾ ಯುವಕರು ಗೋಳಾಡಿದ್ದರೂ ಪೊಲೀಸರು ಸ್ಪಂದಿಸಿಲ್ಲ,

ಪರಿಣಾಮ ಆ ಪೊಲೀಸರನ್ನು  ಸೇವೆಯಿಂದ ಅಮಾನತುಗೊಂಡು ಮನೆ ಸೇರಿದ್ದಾರೆ.ಇದೊಂದು ದುರದೃಷ್ಟಕರ ಅಪಘಾತ. ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಅವರನ್ನು ಸೇವೆಯಿಂದ ಅಮಾನತುಮಾಡಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಹರಾನ್ ಪುರ ವಲಯದ ಡಿಐಜಿ ಕೆ.ಎಸ್. ಇಮ್ಯಾನುವೆಲ್ ತಿಳಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!