ಮುಜಫರ್ ನಗರ್ ಗಲಭೆ ಆರೋಪಿಗಳಲ್ಲಿ ಒಬ್ಬರಾದ ಸಾದ್ವಿ ಪ್ರಾಚಿ ಚಿತ್ರ 
ದೇಶ

ಮುಜಫರ್‏ನಗರ್ ಗಲಭೆ: ಬಿಜೆಪಿ ನಾಯಕರ ವಿರುದ್ಧದ ಕೇಸ್ ವಾಪಸ್ ಪಡೆಯಲು ಯೋಗಿ ಚಿಂತನೆ

2013ರಲ್ಲಿ ಸಂಭವಿಸಿದ್ದ ಮುಜಫರ್ ನಗರ್ ಗಲಭೆ ಸಂಬಂಧ ಬಿಜೆಪಿ ನಾಯಕರ ವಿರುದ್ದದ ಕೇಸ್ ಗಳನ್ನು ವಾಪಸ್ ಪಡೆಯಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ.

ಮುಜಫರ್ ನಗರ್ : 2013ರಲ್ಲಿ ಸಂಭವಿಸಿದ್ದ ಮುಜಫರ್ ನಗರ್ ಗಲಭೆ ಸಂಬಂಧ ಬಿಜೆಪಿ ನಾಯಕರ ವಿರುದ್ದದ ಕೇಸ್ ಗಳನ್ನು ವಾಪಸ್ ಪಡೆಯಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಿಂತನೆ ನಡೆಸಿದ್ದಾರೆ.

ಉತ್ತರ ಪ್ರದೇಶ ಸಚಿವ ಸುರೇಶ್ ರಾಣಾ, ಮಾಜಿ ಕೇಂದ್ರ ಸಚಿವ ಸಂಜೀವ್ ಬಾಲ್ಯಾನ್, ಸಂಸದ ಭರ್ತೇಂದು ಸಿಂಗ್,  ಶಾಸಕ ಉಮೇಶ್ ಮಲ್ಲಿಕ್ ಹಾಗೂ ಬಿಜೆಪಿ ಪಕ್ಷದ ಮುಖಂಡೆ ಸಾದ್ನಿ ಪ್ರಾಚಿ ವಿರುದ್ಧ ಪ್ರಕರಣ ದಾಖಲಾಗಿತ್ತು,

 ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ  ಬಿಜೆಪಿ ನಾಯಕರ ವಿರುದ್ಧ ಪ್ರಕರಣ ವಜಾ ಮಾಡುವುದು ಸೇರಿದಂತೆ 13 ಅಂಶಗಳನ್ನೊಳಗೊಂಡ  ಪತ್ರವೊಂದನ್ನು
ಉತ್ತರ ಪ್ರದೇಶ ನ್ಯಾಯಾಂಗ ಇಲಾಖೆ ವಿಶೇಷ ಕಾರ್ಯದರ್ಶಿ ರಾಜ್ ಸಿಂಗ್ ,  ಜಿಲ್ಲಾ ಮ್ಯಾಜಿಸ್ಟ್ರೇಟ್  ಪತ್ರ ಬರೆದಿದ್ದು,ಈ ಪತ್ರವನ್ನು ಮುಜಫರ್ ನಗರ್ ಹಿರಿಯ ಪೊಲೀಸ್  ಅಧಿಕಾರಿಗೂ ಸಲ್ಲಿಸಿದ್ದಾರೆ.

ಆರೋಪಿಗಳು 2013 ಆಗಸ್ಟ್ ನಲ್ಲಿ   ಕಾನೂನುಬಾಹಿರವಾಗಿ ಮಹಾಪಂಚಾಯತ್ ನಲ್ಲಿ ಪಾಲ್ಗೊಂಡಿದಲ್ಲದೇ, ಪ್ರಚೋಧನಾತ್ಮಕ ಭಾಷಣ ಮಾಡಿದ್ದರು. ನಂತರ ಉಂಟಾದ ಕೋಮುಗಲಭೆಯಲ್ಲಿ 60 ಮಂದಿ ಸಾವನ್ನಪ್ಪಿದ್ದರು. ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಬೇರೆಡೆಗೆ ವಲಸೆ ಹೋಗಿದ್ದರು. ಈ ಪ್ರಕರಣದಲ್ಲಿ 22 ಹೋರಾಟಗಾರರ ವಿರುದ್ಧ ಐಸ್ ಐಟಿ ಆರೋಪ ಪಟ್ಟಿ ದಾಖಲಿಸಿತ್ತು.


 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!