ಡಿಂಕು ಇಂದುಶ್ರೀ ಸೇರಿ 112 ಮಹಿಳಾ ಸಾಧಕಿಯರಿಗೆ ರಾಷ್ಟ್ರಪತಿಗಳಿಂದ ಸನ್ಮಾನ 
ದೇಶ

ರಾಜ್ಯದ ಡಿಂಕು ಇಂದುಶ್ರೀ ಸೇರಿ 112 ಮಹಿಳಾ ಸಾಧಕಿಯರಿಗೆ ರಾಷ್ಟ್ರಪತಿಗಳಿಂದ ಸನ್ಮಾನ

ಮಾತನಾಡುವ ಗೊಂಬೆ ಖ್ಯಾತಿಯ ಡಿಂಕು ಇಂದುಶ್ರೀ ಸೇರಿದಂತೆ ವಿಧ ಕ್ಷೇತ್ರಗಳಲ್ಲಿ ಪ್ರಥಮಗಳ ಸಾಧನೆ ಮಾಡಿದ 112 ಮಹಿಳೆಯರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸನ್ಮಾನಿಸಿದ್ದಾರೆ.

ನವದೆಹಲಿ: ಮಾತನಾಡುವ ಗೊಂಬೆ ಖ್ಯಾತಿಯ ಡಿಂಕು ಇಂದುಶ್ರೀ ಸೇರಿದಂತೆ ವಿಧ ಕ್ಷೇತ್ರಗಳಲ್ಲಿ ಪ್ರಥಮಗಳ ಸಾಧನೆ ಮಾಡಿದ 112 ಮಹಿಳೆಯರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸನ್ಮಾನಿಸಿದ್ದಾರೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ ವತಿಯಿಂದ ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಲಾಗಿದ್ದ  ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ್ ಈ ಗೌರವ ಸಮರ್ಪಣೆ ಮಾಡಿದರು.
ನಿನ್ನೆ (ಶನಿವಾರ) ಸಂಜೆ ರಾಷ್ಟ್ರಪತಿ ಭವನದಲ್ಲಿ ಈ ಸನ್ಮಾನ ಸಮಾರಂಭ ನಡೆದಿದ್ದು ಡಿಂಕು ಇಂದುಶ್ರೀಯೊಡನೆ  ಚೆನ್ನೈನ ಮೊದಲ ಅಂಧ ಐಎಫ್‍ಎಸ್ ಅಧಿಕಾರಿ ಬೆನೊ ಝೆಫೈನ್, ಅಂಧ ಲೆಕ್ಕಪರಿಶೋಧಕಿ ರಜನಿ ಗೋಪಾಲಕೃಷ್ಣನ್  ಪಿಟಿ ಉಷಾ, ಪಿವಿ ಸಿಂಧು, ಸಾನಿಯಾ ಮಿರ್ಜಾ, ಐಶ್ವರ್ಯಾ ರೈ, ಕಿರಣ್ ಮಜುಮ್ದಾರ್ ಷಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದ ಮಹಿಳಾ ಸಾಧಕಿಯರನ್ನು ಸನ್ಮಾನಿಸಲಾಗಿದೆ. 
ಡಿಂಕು ಇಂದುಶ್ರೀ ಎಂದೇ ಖ್ಯಾತರಾಗಿರುವ ಇಂದುಶ್ರೀ ಇಂದು  ವಿವಿಧ ದೇಶಗಳಲ್ಲಿ ಸಾವಿರಾರು ಕಾರ್ಯಕ್ರಮಗಳನ್ನು ನೀಡುವ ಮೂಲಕ ವಿಶ್ವ ಖ್ಯಾತಿ ಗಳಿಸಿದ್ದಾರೆ. ಇವರು ಇತ್ತೀಚೆಗೆ ಸಿಎನ್‍ಎನ್ ಚಾನೆಲ್‍ ನಲ್ಲಿ ಒಂದು ಕಾರ್ಯಕ್ರಮ ನೀಡುವ ಮೂಲಕ ಗಮನ ಸೇಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!