ಸಂಗ್ರಹ ಚಿತ್ರ 
ದೇಶ

ಗಣರಾಜ್ಯೋತ್ಸವ ದಿನದಂದು ಉಗ್ರದಾಳಿಗೆ ಭಾರಿ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಾರತೀಯ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಇದಕ್ಕಾಗಿ ಮೂರರಿಂದ ನಾಲ್ಕು ಉಗ್ರರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಈ ಉಗ್ರರು ಪಾಕಿಸ್ತಾನಿ ಸೇನಾ ಕ್ಯಾಂಪ್ ಗಳತ್ತ ಕಾಣಿಸಿಕೊಂಡಿದ್ದು, ಭಾರತೀಯ ಗಡಿಯೊಳಗೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. 
ಅಂತೆಯೇ ಈ ಬಗ್ಗೆ ತೀವ್ರಕಟ್ಟೆಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಿದ್ದು, ಉಗ್ರರಿಗೆ ಪಾಕಿಸ್ತಾನಿ ಗುಪ್ತಚರ ಇಲಾಖೆ ಐಎಸ್ಐ ಉಗ್ರರನ್ನು ಭಾರತೀಯ ಗಡಿಯೊಳಗೆ ಒಳನುಸುಳಲು ನೆರವು ನೀಡುತ್ತಿದ್ದು, ಗಡಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT