ಸಂಗ್ರಹ ಚಿತ್ರ 
ದೇಶ

ಗಣರಾಜ್ಯೋತ್ಸವ ದಿನದಂದು ಉಗ್ರದಾಳಿಗೆ ಭಾರಿ ಸಂಚು: ಗುಪ್ತಚರ ಇಲಾಖೆ ಎಚ್ಚರಿಕೆ

ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ನವದೆಹಲಿ: ಅಸಿಯಾನ್ ನಾಯಕರು ಅತಿಥಿಗಳಾಗಿ ಭಾಗವಹಿಸುತ್ತಿರುವ ಗಣರಾಜ್ಯೋತ್ಸವ ದಿನಕ್ಕೆ ಭಾರತ ಸಕಲ ಸಿದ್ಧತೆ ನಡೆಸಿರುವಂತೆಯೇ ಅತ್ತ ಇಂಡೋ-ಪಾಕ್ ಅಂತಾರಾಷ್ಟೀಯ ಗಡಿಯಲ್ಲಿ ಭಾರಿ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಾರತೀಯ ಸೇನಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದು, ಇದಕ್ಕಾಗಿ ಮೂರರಿಂದ ನಾಲ್ಕು ಉಗ್ರರನ್ನು ನಿಯೋಜನೆ ಮಾಡಲಾಗಿದೆ. ಈಗಾಗಲೇ ಈ ಉಗ್ರರು ಪಾಕಿಸ್ತಾನಿ ಸೇನಾ ಕ್ಯಾಂಪ್ ಗಳತ್ತ ಕಾಣಿಸಿಕೊಂಡಿದ್ದು, ಭಾರತೀಯ ಗಡಿಯೊಳಗೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. 
ಅಂತೆಯೇ ಈ ಬಗ್ಗೆ ತೀವ್ರಕಟ್ಟೆಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಿದ್ದು, ಉಗ್ರರಿಗೆ ಪಾಕಿಸ್ತಾನಿ ಗುಪ್ತಚರ ಇಲಾಖೆ ಐಎಸ್ಐ ಉಗ್ರರನ್ನು ಭಾರತೀಯ ಗಡಿಯೊಳಗೆ ಒಳನುಸುಳಲು ನೆರವು ನೀಡುತ್ತಿದ್ದು, ಗಡಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ