ಕೋಲ್ಕತಾ: ಕೋಲ್ಕತಾದ ಗೋರಾ ಬಜಾರ್ ಮಾರುಕಟ್ಟೆಯಲ್ಲಿ ಸುಮಾರು 200 ಅಂಗಡಿಗಳು ಬೆಂಕಿಗಾಹುತಿಯಾಗಿಯಾಗಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಅಗ್ನಿ ಆಕಸ್ಮಿಕದಲ್ಲಿ ಸಜೀವ ದಹನವಾದ ಇಬ್ಬರು ವ್ಯಕ್ತಿಗಳನ್ನು ಸುನಿಲ್ ಸಾಹು ಮತ್ತು ವಿಕ್ಕಿ ಸಾಹು ಎಂದು ಗುರುತಿಸಲಾಗಿದ್ದು, ಅಂಗಡಿಯಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸುನಿಲ್ ಸಾಹು ಕಚೋರಿ ಮಾರಾಟಗಾರರಾಗಿದ್ದು, ವಿಕ್ಕಿ ಸಾಹು ಆತನ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ ಸರಸ್ವತಿ ಪೂಜಾ ಉತ್ಸವವಿದ್ದ ಕಾರಣ ಇಬ್ಬರು ನಿನ್ನೆ ರಾತ್ರಿ ತಮ್ಮ ಅಂಗಡಿಯಲ್ಲೇ ಮಲಗಿದ್ದರು. ಬೆಳಗಿನ ಜಾವ 1.45ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, ಉಸಿರುಕಟ್ಟಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಕಿ ಮಾರುಕಟ್ಟೆಯಲ್ಲಿರುವ ಸುಮಾರು 200 ಅಂಗಡಿಗಳಿಗೆ ವ್ಯಾಪಿಸಿದ್ದು, 22 ಅಗ್ನಿ ಶಾಮಕ ವಾಹನಗಳು ಬೆಂಕಿ ನಿಯಂತ್ರಿಸಲು ಸುಮಾರು 8 ಗಂಟೆಗಳ ಕಾಲ ಹರಸಾಹಸಪಟ್ಟಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಅಗ್ನಿ ಆಕಸ್ಮಿಕಕ್ಕೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos