ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ, ರಾಜಕೀಯ ಪಕ್ಷಗಳು ದೂರವಿರಬೇಕು: ಪ್ರಧಾನಿ ಮೋದಿ

ಪ್ರಸ್ತುತ ದೇಶದಲ್ಲಿ ಸೃಷ್ಟಿಗೊಂಡಿರುವ ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ದೂರವಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ...

ನವದೆಹಲಿ: ಪ್ರಸ್ತುತ ದೇಶದಲ್ಲಿ ಸೃಷ್ಟಿಗೊಂಡಿರುವ ನ್ಯಾಯಾಂಗ ಬಿಕ್ಕಟ್ಟು ವಿಚಾರದಿಂದ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ದೂರವಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 
ಟೈಮ್ಸ್ ನೌ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಎದುರಾಗಿರುವ ಬಿಕ್ಕಟ್ಟನ್ನು ನ್ಯಾಯಾಂಗವೇ ಕುಳಿತು ಸಮಸ್ಯೆಯನ್ನು ಪರಿಹರಿಸಿಕೊಳ್ಳಲಿದೆ. ಹೀಗಾಗಿ ನ್ಯಾಯಾಂಗ ಬಿಕ್ಕಟ್ಟು ವಿಚಾರದಲ್ಲಿ ಸರ್ಕಾರವಾಗಲೀ, ರಾಜಕೀಯ ಪಕ್ಷಗಳು ದೂರವಿರಬೇಕೆಂದು ಹೇಳಿದ್ದಾರೆ. 
ನಮ್ಮ ನ್ಯಾಯಾಂಗ ಹಿಂದಿನಿಂದಲೂ ಸಾಕಷ್ಟು ಶಕ್ತಿಶಾಲಿಯಾಗಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಅತ್ಯಂತ ಸಾಮರ್ಥ್ಯವುಳ್ಳ ಜನರಿದ್ದಾರೆ. ಯಾವುದೇ ಸಮಸ್ಯೆ ಎದುರಾದರೂ ಒಗ್ಗಟ್ಟಿನಿಂದ ಕುಳಿತು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ. ನಾಯ್ಯಾಂಗ ವ್ಯವಸ್ಥೆ ಮೇಲೆ ನನಗೆ ನಂಬಿಕೆಯಿಂದೆ. ಸಮಸ್ಯೆಗೆ ಖಂಡಿತವಾಗಿಯೂ ಪರಿಹಾರವನ್ನು ಕಂಡುಕೊಳ್ಳುತ್ತಾರೆಂದು ತಿಳಿಸಿದ್ದಾರೆ. 
ಇದೇ ವೇಳೆ ಸಿಜೆಐ ವಿರುದ್ಧ ಸಿಡಿದೆದ್ದು ಸುದ್ದಿಗೋಷ್ಟಿ ನಡೆಸಿದ್ದ ನ್ಯಾಯಾಧೀಶರ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ಈ ವಿಚಾರದಿಂದ ನಾನು ದೂರವಿರಲು ಇಚ್ಛಿಸುತ್ತೇನೆ. ಅಲ್ಲದೆ, ಸರ್ಕಾರ ಹಾಗೂ ರಾಜಕೀಯ ಪಕ್ಷಗಳೂ ಕೂಡ ಈ ವಿಚಾರದಿಂದ ದೂರವಿರಬೇಕು ಎಂದಿದ್ದಾರೆ. 

ಗುಜರಾತ್ ರಾಜ್ಯ ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷಗಳ ವರ್ತನೆ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಜಕೀಯವಾಗಿ ನನ್ನನ್ನು ಅಂತ್ಯಗೊಳಿಸಲು ಸಾಕಷ್ಟು ಯತ್ನಗಳು ನಡೆದಿದ್ದವು. ಅವರು ಹಿಡಿದ ಹಾದಿಯೇ ಇಂದು ನಾನು ಈ ಮಟ್ಟಕ್ಕೆ ತಲುಪಲು ಸಹಾಯವಾಯಿತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT