ಮುಂಜಾಗ್ರತಾ ಕ್ರಮವಾಗಿ ಭರತ್ ನಗರದಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ. 
ದೇಶ

ವಧುವಿನ ಕನ್ಯತ್ವ ಪರೀಕ್ಷೆ ವಿರೋಧಿಸಿದ ಯುವಕರ ಮೇಲೆ ಮದುವೆ ಮಂಟಪದಲ್ಲೇ ಹಲ್ಲೆ

ವಧುವಿನ ಕನ್ಯತ್ವ ಪರೀಕ್ಷೆ ವಿರೋಧಿಸಿದ ಯುವಕರಿಗೆ ಮದುವೆ ಮಂಟಪದಲ್ಲೇ ಥಳಿಸಿರುವ ಘಟನೆ ಯುರವಾಡದ ಭರತ್ ನಗರದಲ್ಲಿ ನಡೆದಿದೆ.

ಪುಣೆ:  ವಧುವಿನ ಕನ್ಯತ್ವ ಪರೀಕ್ಷೆ ವಿರೋಧಿಸಿದ ಯುವಕರಿಗೆ ಮದುವೆ ಮಂಟಪದಲ್ಲೇ ಥಳಿಸಿರುವ ಘಟನೆ ಯುರವಾಡದ ಭರತ್ ನಗರದಲ್ಲಿ ನಡೆದಿದೆ.

 ಪಂಪ್ರಿಯಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಸಮುದಾಯದ ಮುಖಂಡರು ಸಭೆ ನಡೆಸಿ ಕನ್ಯತ್ವ ಪರೀಕ್ಷೆ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದ್ದು, ಆ ಪರೀಕ್ಷೆ ನಡೆಯಬೇಕೆಂದು ನಿರ್ಧರಿಸಲಾಗಿದೆ.

ಆದರೆ, ಇಂತಹ ಪದ್ದತಿಯನ್ನು  ಯುವಕರ ಗುಂಪೊಂದು ವಿರೋಧಿಸುತ್ತಾ ಬಂದಿದ್ದು, ವಾಟ್ಸಾಪ್ ನಲ್ಲಿ ಗುಂಪು ರೂಪಿಸಿಕೊಂಡು ಇದರ ವಿರುದ್ಧ ಧ್ವನಿ ಎತ್ತುವ ಕೆಲಸದಲ್ಲಿ ನಿರತವಾಗಿದೆ.ವಧುವಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಮುದಾಯದಲ್ಲಿ ಜನ  ಜಾಗೃತಿ ಮೂಡಿಸಲಾಗುತ್ತಿದೆ .

ಮದುವೆ ಮಂಟಪದಲ್ಲಿದ್ದ  ಆ ಯುವಕರ  ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಭರತ್ ನಗರದ ನಿವಾಸಿ ಪ್ರಶಾಂತ್ ಅಂಕುಶ್ ಇಂದ್ರೇಕರ್ ನೀಡಿರುವ ದೂರಿನ ಅನ್ವಯ  ಪೊಲೀಸರು  ಇಬ್ಬರನ್ನು ಬಂಧಿಸಿದ್ದು, 40 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಆಯುಕ್ತ ಗಣೇಶ್ ಶಿಂಧೆ ತಿಳಿಸಿದ್ದಾರೆ.

ನಂತರ ಮಹಾರಾಷ್ಟ್ರ ಅಂದಶ್ರದ್ಧ ನಿರ್ಮೂಲನಾ ಸಮಿತಿ ನೆರವಿನೊಂದಿಗೆ ವಾಟ್ಸಪ್ ಗುಂಪಿನ ಯುವಕರು ಉಪ ಆಯುಕ್ತ ದೀಪಕ್ ಸಕೊರೆ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದು, ಕನ್ಯತ್ವ ಪರೀಕ್ಷೆ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಭರತ್ ನಗರದಲ್ಲಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

SCROLL FOR NEXT