ಸಂಗ್ರಹ ಚಿತ್ರ 
ದೇಶ

ಉಪಚುನಾವಣೆ ಹೇರಿಕೆಯಿಂದ ದೆಹಲಿ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಲಿಗೆ: ಕೇಜ್ರಿವಾಲ್

ದೆಹಲಿಯಲ್ಲಿ ಉಪ ಚುನಾವಣೆ ಘೋಷಣೆ ಮಾಡುವುದರಿಂದ ದೆಹಲಿಯ ಅಭಿವೃದ್ಧಿ ಕಾರ್ಯಗಳು 2 ವರ್ಷಗಳ ಕಾಲ ತಡವಾಗಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಉಪ ಚುನಾವಣೆ ಘೋಷಣೆ ಮಾಡುವುದರಿಂದ ದೆಹಲಿಯ ಅಭಿವೃದ್ಧಿ ಕಾರ್ಯಗಳು 2 ವರ್ಷಗಳ ಕಾಲ ತಡವಾಗಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಲಾಭದಾಯಕ ಹುದ್ದೆ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವ ಕುರಿತು ಕೇಂದ್ರ ಚುನಾವಣಾ ಆಯೋಕ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದು, ಇದೀಗ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಆಪ್ ಶಾಸಕರು ರಾಷ್ಟ್ರಪತಿಗಳ ಅಂಕಿತ ಪ್ರಶ್ನಿಸಿ ದೆಹಲಿ  ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇನ್ನು ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಉಪ ಚುನಾವಣೆ ದೆಹಲಿ ಜನತೆಗೆ ದುಬಾರಿಯಾಗಿ ಪರಿಣಮಿಸುತ್ತದೆ. ದೆಹಲಿಯಲ್ಲಿ ಹಾಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು  ಚುನಾವಣೆಯಿಂದಾಗಿ ತಡವಾಗಲಿದೆ ಎಂದು ಹೇಳಿದ್ದಾರೆ. ಅಂತೆಯೇ ಆಪ್ ಶಾಸಕರ ಅನರ್ಹತೆ ಕುರಿತು ಮಾತನಾಡಿರುವ ಕೇಜ್ರಿವಾಲ್, ಶಾಸಕರನ್ನು ಕಾರ್ಯದರ್ಶಿಗಳಾಗಿ ಆಯ್ಕೆ ಮಾಡಲಾಗಿತ್ತಾದರೂ ಅವರಿಗೆ ದೆಹಲಿ ಸರ್ಕಾರ  ಯಾವುದೇ ರೀತಿಯ ವೇತನ ನೀಡಿಲ್ಲ. ಈ 20 ಶಾಸಕರಿಗೆ ನಾನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು ಅಷ್ಟೇ.. ಹೀಗಿದ್ದೂ ಅವರ ಅನರ್ಹತೆ ಸರಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿಗೆ ಭಯಪಡುವುದಿಲ್ಲ
ಇದೇ ವೇಳೆ ತಾವು ಉಪಚಾನವಣೆ ಬೇಡ ಎಂದಾಕ್ಷಣ ನಾನು ಬಿಜೆಪಿಗೆ ಹೆದರುತ್ತಿದ್ದೇನೆ ಎಂದು ಅಲ್ಲ. ನಾವು ಸತ್ಯ ಮತ್ತು ಧೈರ್ಯದಿಂದ ಇದ್ದಾಗ ಎಂತಹ ಸಮಸ್ಯೆಗಳನ್ನಾದರೂ ಎದುರಿಸಬಹುದು. ದೆಹಲಿಯಲ್ಲಿ ಚುನಾವಣೆ  ಹೇರುವ ಮೂಲಕ ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ತೊಡಕುಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT