ಸಂಗ್ರಹ ಚಿತ್ರ 
ದೇಶ

ಉಪಚುನಾವಣೆ ಹೇರಿಕೆಯಿಂದ ದೆಹಲಿ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯಾಗಲಿಗೆ: ಕೇಜ್ರಿವಾಲ್

ದೆಹಲಿಯಲ್ಲಿ ಉಪ ಚುನಾವಣೆ ಘೋಷಣೆ ಮಾಡುವುದರಿಂದ ದೆಹಲಿಯ ಅಭಿವೃದ್ಧಿ ಕಾರ್ಯಗಳು 2 ವರ್ಷಗಳ ಕಾಲ ತಡವಾಗಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಉಪ ಚುನಾವಣೆ ಘೋಷಣೆ ಮಾಡುವುದರಿಂದ ದೆಹಲಿಯ ಅಭಿವೃದ್ಧಿ ಕಾರ್ಯಗಳು 2 ವರ್ಷಗಳ ಕಾಲ ತಡವಾಗಲಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಲಾಭದಾಯಕ ಹುದ್ದೆ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವ ಕುರಿತು ಕೇಂದ್ರ ಚುನಾವಣಾ ಆಯೋಕ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿಗೆ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದು, ಇದೀಗ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಸ್ತುತ ಆಪ್ ಶಾಸಕರು ರಾಷ್ಟ್ರಪತಿಗಳ ಅಂಕಿತ ಪ್ರಶ್ನಿಸಿ ದೆಹಲಿ  ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇನ್ನು ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಉಪ ಚುನಾವಣೆ ದೆಹಲಿ ಜನತೆಗೆ ದುಬಾರಿಯಾಗಿ ಪರಿಣಮಿಸುತ್ತದೆ. ದೆಹಲಿಯಲ್ಲಿ ಹಾಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು  ಚುನಾವಣೆಯಿಂದಾಗಿ ತಡವಾಗಲಿದೆ ಎಂದು ಹೇಳಿದ್ದಾರೆ. ಅಂತೆಯೇ ಆಪ್ ಶಾಸಕರ ಅನರ್ಹತೆ ಕುರಿತು ಮಾತನಾಡಿರುವ ಕೇಜ್ರಿವಾಲ್, ಶಾಸಕರನ್ನು ಕಾರ್ಯದರ್ಶಿಗಳಾಗಿ ಆಯ್ಕೆ ಮಾಡಲಾಗಿತ್ತಾದರೂ ಅವರಿಗೆ ದೆಹಲಿ ಸರ್ಕಾರ  ಯಾವುದೇ ರೀತಿಯ ವೇತನ ನೀಡಿಲ್ಲ. ಈ 20 ಶಾಸಕರಿಗೆ ನಾನು ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು ಅಷ್ಟೇ.. ಹೀಗಿದ್ದೂ ಅವರ ಅನರ್ಹತೆ ಸರಿಯಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿಗೆ ಭಯಪಡುವುದಿಲ್ಲ
ಇದೇ ವೇಳೆ ತಾವು ಉಪಚಾನವಣೆ ಬೇಡ ಎಂದಾಕ್ಷಣ ನಾನು ಬಿಜೆಪಿಗೆ ಹೆದರುತ್ತಿದ್ದೇನೆ ಎಂದು ಅಲ್ಲ. ನಾವು ಸತ್ಯ ಮತ್ತು ಧೈರ್ಯದಿಂದ ಇದ್ದಾಗ ಎಂತಹ ಸಮಸ್ಯೆಗಳನ್ನಾದರೂ ಎದುರಿಸಬಹುದು. ದೆಹಲಿಯಲ್ಲಿ ಚುನಾವಣೆ  ಹೇರುವ ಮೂಲಕ ಇಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ತೊಡಕುಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT