ರಾಘವ್ ಚಡ್ಡಾ 
ದೇಶ

ಲಾಭದಾಯಕ ಹುದ್ದೆ: ಚುನಾವಣಾ ಆಯೋಗ 'ಖಾಪ್ ಪಂಚಾಯ್ತಿ' ಎಂದ ಆಪ್

ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸರುವ ಚುನಾವಣಾ ಆಯೋಗವನ್ನು ಆಪ್ ಖಾಪ್....

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸರುವ ಚುನಾವಣಾ ಆಯೋಗವನ್ನು ಆಪ್ ಖಾಪ್ ಪಂಚಾಯ್ತಿಗೆ ಹೊಲಿಸಿದೆ. ಅಲ್ಲದೆ ಚುನಾವಣಾ ಆಯೋಗದ ನೂತನ ಆಯುಕ್ತ ಒ ಪಿ ರಾವತ್ ಅವರ ಬಿಜೆಪಿ ನಂಟನ್ನು ಪ್ರಶ್ನಿಸಿದೆ.
ಆಪ್ ಶಾಸಕರ ಲಾಭದಾಯಕ ಹುದ್ದೆ ಪ್ರಕರಣದ ವಿಚಾರಣೆ ನಡೆಸಲು ಸ್ವತಃ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸೇರಿದಂತೆ ಹಲವು ಬಿಜೆಪಿ ನಾಯಕರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ ಎಂದು ಆಪ್ ವಕ್ತಾರ ರಾಘವ್ ಚಡ್ಡಾ ಅವರು ಆರೋಪಿಸಿದ್ದಾರೆ.
ಚುನಾವಣಾ ಆಯೋಗ ಖಾಪ್ ಪಂಚಾಯ್ತಿ ರೀತಿ ವರ್ತಿಸುತ್ತಿದೆ. ಯಾವುದೇ ವಿಚಾರಣೆ ನಡೆಸದೇ ಏಕಪಕ್ಷೀಯವಾಗಿ ತೀರ್ಪು ನೀಡುತ್ತಿದೆ ಎಂದು ಚಡ್ಡಾ ಅವರು ವಾಗ್ದಾಳಿ ನಡೆಸಿದ್ದಾರೆ.
ಕಳೆದ ಶುಕ್ರವಾರ ಎಎಪಿಯ 20 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದು ಅವರ ಶಾಸಕತ್ವನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿತ್ತು. ಆಯೋಗದ ಶಿಫಾರಸಿಗೆ ರಾಷ್ಟ್ರಪತಿಗಳು ಶನಿವಾರ ಸಹಿ ಹಾಕಿದ್ದಾರೆ.
ಚುನಾವಣಾ ಆಯೋಗದ ಅನರ್ಹತೆಯನ್ನು ಪ್ರಶ್ನಿಸಿ ಈಗ ಆಪ್ ಶಾಸಕರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT