ಸಂಗ್ರಹ ಚಿತ್ರ 
ದೇಶ

ನೂತನ ಕೇಂದ್ರ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅಧಿಕಾರ ಸ್ವೀಕಾರ

ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅವರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅವರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಈ ಹಿಂದಿನ ಚುನಾವಣಾ ಆಯುಕ್ತರಾಗಿದ್ದ ಎ.ಕೆ. ಜೋಟಿ ನಿನ್ನೆಯಷ್ಟೇ ನಿವೃತ್ತಿಯಾಗಿರುವ ಹಿನ್ನಲೆಯಲ್ಲಿ ಕಾನೂನು ಸಚಿವಾಲಯ ನೂತನ ಆಯುಕ್ತರಾಗಿ ಓಂ ಪ್ರಕಾಶ್ ರಾವತ್ ಅವರನ್ನು ನೇಮಕ ಮಾಡಿ ಅಧಿಕೃತ ಪ್ರಕಟಣೆ  ಹೊರಡಿಸಿತ್ತು. ಅಲ್ಲದೆ ಒಪಿ ರಾವತ್ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ಅಂಕಿತ ಹಾಗಿದ್ದಾರೆ ಎನ್ನಲಾಗಿದೆ.
1977ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಒಪಿ ರಾವತ್ ಅವರು ಮಧ್ಯ ಪ್ರದೇಶ ಮೂಲದವರಾಗಿದ್ದು, 2015ರ ಆಗಸ್ಟ್ ನಲ್ಲಿ ಚುನಾವಣಾ ಆಯೋಗಕ್ಕೆಸೇರ್ಪಡೆಯಾಗಿದ್ದರು. 
ಲಾಭದಾಯಕ ಹುದ್ದೆ ಪ್ರಕರಣ ಸಂಬಂಧ ಆಪ್ ನ 20 ಶಾಸಕರನ್ನು ಅನರ್ಹಗೊಳಿಸುವ ಕುರಿತು ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಿದ ದಿನವೇ ಒಪಿ ರಾವತ್ ಆಯುಕ್ತರಾಗಿ ಆಯ್ಕೆಯಾಗಿದ್ದರು. ಇನ್ನು  ರಾವತ್ ನೇತೃತ್ವದಲ್ಲಿ ಆಯೋಗ ಕರ್ನಾಟಕ, ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಮತ್ತು 2019ರ ಲೋಕಸಭಾ ಚುನಾವಣೆ ಮೇಲುಸ್ತುವಾರಿ ನೋಡಿಕೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT