ಅಸಾವುದ್ದೀನ್ ಒವೈಸಿ 
ದೇಶ

ತ್ರಿವಳಿ ತಲಾಖ್ ಮಸೂದೆ ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಒಂದು ತಂತ್ರ: ಓವೈಸಿ

ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರುವ ಮೂಲಕ ಮುಸ್ಲಿಂ ಸಮುದಾಯ ಪುರುಷರನ್ನು ಶಿಕ್ಷಿಸುವ ಒಂದು ತಂತ್ರವಾಗಿದೆ ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಆರೋಪಿಸಿದ್ದಾರೆ...

ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರುವ ಮೂಲಕ ಮುಸ್ಲಿಂ ಸಮುದಾಯ ಪುರುಷರನ್ನು ಶಿಕ್ಷಿಸುವ ಒಂದು ತಂತ್ರವಾಗಿದೆ ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಆರೋಪಿಸಿದ್ದಾರೆ. 
ಪದ್ಮಾವತ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಮಿತಿಯು ರಚನೆಯಾಯಿತು ಆದರೆ ತ್ರಿವಳಿ ತಲಾಖ್ ವಿಷಯದ ಬಗ್ಗೆ ಇಂತಹ ಹೆಜ್ಜೆ ಇಡಲಿಲ್ಲ ಎಂದು ಹೈದರಾಬಾದ್ ನ ಲೋಕಸಭಾ ಸಂಸದ ಕೇಂದ್ರ ಸರ್ಕಾರದ ವಿರುದ್ಧ ಒವೈಸಿ ವಾಗ್ದಾಳಿ ನಡೆಸಿದರು. 
ತ್ರಿವಳಿ ತಲಾಖ್ ಮಸೂದೆ ಮುಸ್ಲಿಂ ಸಮುದಾಯದ ವಿರುದ್ಧದ ಪಿತ್ತೂರಿಯಾಗಿದೆ. ಆ ಮೂಲಕ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳನ್ನು ರಸ್ತೆಗೆ ಕರೆತರುವುದು ಮತ್ತು ಪುರುಷರನ್ನು ಜೈಲಿಗೆ ಕಳುಹಿಸಲು ಇದು ಒಂದು ತಂತ್ರವಾಗಿದೆ ಎಂದು ಸಾರ್ವಜನಿಕ ರ್ಯಾಲಿಯೊಂದರಲ್ಲಿ ಒವೈಸಿ ಆರೋಪಿಸಿದ್ದಾರೆ. 
ಇದೇ ವೇಳೆ ವಿಚ್ಛೇದನ ನೀಡಲು ತ್ರಿವಳಿ ತಲಾಖ್ ಮಾರ್ಗವನ್ನು ತೆಗೆದುಕೊಳ್ಳುವವರನ್ನು ಸಾಮಾಜಿಕವಾಗಿ ಬಹಿಷ್ಕರಿ ಎಂದು ಮುಸ್ಲಿಂ ಸಮುದಾಯವನ್ನು ಕೇಳಿದರು. 
ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಏನನ್ನು ಮಾಡುತ್ತಿಲ್ಲ. ಆದರೆ ಇತರರು ಮಾಡಿದ ಉತ್ತಮ ಕೆಲಸಗಳಿಂದ ಅವರು ಕ್ರೆಡಿಟ್ ಪಡೆದುಕೊಳ್ಳಲು ಮುಂದಾಗಿರುತ್ತಾರೆ ಎಂದು ಆರೋಪಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ