ಅಸಾವುದ್ದೀನ್ ಒವೈಸಿ 
ದೇಶ

ತ್ರಿವಳಿ ತಲಾಖ್ ಮಸೂದೆ ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಒಂದು ತಂತ್ರ: ಓವೈಸಿ

ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರುವ ಮೂಲಕ ಮುಸ್ಲಿಂ ಸಮುದಾಯ ಪುರುಷರನ್ನು ಶಿಕ್ಷಿಸುವ ಒಂದು ತಂತ್ರವಾಗಿದೆ ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಆರೋಪಿಸಿದ್ದಾರೆ...

ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರುವ ಮೂಲಕ ಮುಸ್ಲಿಂ ಸಮುದಾಯ ಪುರುಷರನ್ನು ಶಿಕ್ಷಿಸುವ ಒಂದು ತಂತ್ರವಾಗಿದೆ ಎಐಎಂಐಎಂ ಅಧ್ಯಕ್ಷ ಅಸಾವುದ್ದೀನ್ ಒವೈಸಿ ಆರೋಪಿಸಿದ್ದಾರೆ. 
ಪದ್ಮಾವತ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಮಿತಿಯು ರಚನೆಯಾಯಿತು ಆದರೆ ತ್ರಿವಳಿ ತಲಾಖ್ ವಿಷಯದ ಬಗ್ಗೆ ಇಂತಹ ಹೆಜ್ಜೆ ಇಡಲಿಲ್ಲ ಎಂದು ಹೈದರಾಬಾದ್ ನ ಲೋಕಸಭಾ ಸಂಸದ ಕೇಂದ್ರ ಸರ್ಕಾರದ ವಿರುದ್ಧ ಒವೈಸಿ ವಾಗ್ದಾಳಿ ನಡೆಸಿದರು. 
ತ್ರಿವಳಿ ತಲಾಖ್ ಮಸೂದೆ ಮುಸ್ಲಿಂ ಸಮುದಾಯದ ವಿರುದ್ಧದ ಪಿತ್ತೂರಿಯಾಗಿದೆ. ಆ ಮೂಲಕ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳನ್ನು ರಸ್ತೆಗೆ ಕರೆತರುವುದು ಮತ್ತು ಪುರುಷರನ್ನು ಜೈಲಿಗೆ ಕಳುಹಿಸಲು ಇದು ಒಂದು ತಂತ್ರವಾಗಿದೆ ಎಂದು ಸಾರ್ವಜನಿಕ ರ್ಯಾಲಿಯೊಂದರಲ್ಲಿ ಒವೈಸಿ ಆರೋಪಿಸಿದ್ದಾರೆ. 
ಇದೇ ವೇಳೆ ವಿಚ್ಛೇದನ ನೀಡಲು ತ್ರಿವಳಿ ತಲಾಖ್ ಮಾರ್ಗವನ್ನು ತೆಗೆದುಕೊಳ್ಳುವವರನ್ನು ಸಾಮಾಜಿಕವಾಗಿ ಬಹಿಷ್ಕರಿ ಎಂದು ಮುಸ್ಲಿಂ ಸಮುದಾಯವನ್ನು ಕೇಳಿದರು. 
ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ ಏನನ್ನು ಮಾಡುತ್ತಿಲ್ಲ. ಆದರೆ ಇತರರು ಮಾಡಿದ ಉತ್ತಮ ಕೆಲಸಗಳಿಂದ ಅವರು ಕ್ರೆಡಿಟ್ ಪಡೆದುಕೊಳ್ಳಲು ಮುಂದಾಗಿರುತ್ತಾರೆ ಎಂದು ಆರೋಪಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT