ಶೇಖ್ ಸಲೀಮ್ ಗಫೂರ್‌ (ಬಲ) 
ದೇಶ

ಅಮರನಾಥ ಯಾತ್ರಿಗಳನ್ನು ರಕ್ಷಿಸಿದ ಚಾಲಕನಿಗೆ 2ನೇ ಅತ್ಯುನ್ನತ ಶೌರ್ಯ ಪ್ರಶಸ್ತಿ

ಉಗ್ರರ ಗುಂಡಿನ ದಾಳಿಯ ನಡುವೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ಉಳಿಸಿದ್ದ ಗುಜರಾತ್‌ ಬಸ್....

ನವದೆಹಲಿ: ಉಗ್ರರ ಗುಂಡಿನ ದಾಳಿಯ ನಡುವೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ಉಳಿಸಿದ್ದ ಗುಜರಾತ್‌ ಬಸ್ ಚಾಲಕ ಶೇಖ್ ಸಲೀಮ್ ಗಫೂರ್‌ ಅವರಿಗೆ ಕೇಂದ್ರ ಸರ್ಕಾರ ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಗಣರಾಜ್ಯೋತ್ಸವ ವೇಳೆ ಶೌರ್ಯ ಪ್ರದರ್ಶನಕ್ಕಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ನೀಡುವ ಅತ್ಯುನ್ನತ ಪುರಸ್ಕಾರ 'ಸರ್ವೋತ್ತಮ ಜೀವನ ರಕ್ಷ ಪದಕ' ವನ್ನು ಗಫೂರ್ ಗೆ ನೀಡಲಾಗಿದೆ.
ಪ್ರಶಸ್ತಿ ಜತೆಗೆ ಅವರಿಗೆ 1 ಲಕ್ಷ ನಗದು ಪುರಸ್ಕಾರವನ್ನೂ ಗಣರಾಜ್ಯೋತ್ಸವ ಆಚರಣೆಯಂದು ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ತಿಳಿಸಿದೆ.
2017ರ ಜುಲೈ 10ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಟೆಂಗೂ ಎಂಬಲ್ಲಿ ಉಗ್ರರ ತಂಡ ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 14 ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಅಲ್ಲದೆ ಹಲವರು ಗಾಯಗೊಂಡಿದ್ದರು. ಆದರೆ ಬಸ್ ಚಾಲಕ ಗಫೂರ್ ಅವರು ಗುಂಡಿನ ದಾಳಿಯ ನಡುವೆಯೂ ಬಸ್ಸನ್ನೂ ಸುರಕ್ಷಿತ ಸ್ಥಳಕ್ಕೆ ಚಲಾಯಿಸಿಕೊಂಡು ಹೋಗಿ 52 ಮಂದಿ ಪ್ರಾಣ ರಕ್ಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT