ಶೇಖ್ ಸಲೀಮ್ ಗಫೂರ್‌ (ಬಲ) 
ದೇಶ

ಅಮರನಾಥ ಯಾತ್ರಿಗಳನ್ನು ರಕ್ಷಿಸಿದ ಚಾಲಕನಿಗೆ 2ನೇ ಅತ್ಯುನ್ನತ ಶೌರ್ಯ ಪ್ರಶಸ್ತಿ

ಉಗ್ರರ ಗುಂಡಿನ ದಾಳಿಯ ನಡುವೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ಉಳಿಸಿದ್ದ ಗುಜರಾತ್‌ ಬಸ್....

ನವದೆಹಲಿ: ಉಗ್ರರ ಗುಂಡಿನ ದಾಳಿಯ ನಡುವೆಯೂ ಸುರಕ್ಷಿತವಾಗಿ ಬಸ್ಸನ್ನು ಚಲಾಯಿಸಿಕೊಂಡು 52 ಅಮರನಾಥ ಯಾತ್ರಾರ್ಥಿಗಳ ಪ್ರಾಣ ಉಳಿಸಿದ್ದ ಗುಜರಾತ್‌ ಬಸ್ ಚಾಲಕ ಶೇಖ್ ಸಲೀಮ್ ಗಫೂರ್‌ ಅವರಿಗೆ ಕೇಂದ್ರ ಸರ್ಕಾರ ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಗಣರಾಜ್ಯೋತ್ಸವ ವೇಳೆ ಶೌರ್ಯ ಪ್ರದರ್ಶನಕ್ಕಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ನೀಡುವ ಅತ್ಯುನ್ನತ ಪುರಸ್ಕಾರ 'ಸರ್ವೋತ್ತಮ ಜೀವನ ರಕ್ಷ ಪದಕ' ವನ್ನು ಗಫೂರ್ ಗೆ ನೀಡಲಾಗಿದೆ.
ಪ್ರಶಸ್ತಿ ಜತೆಗೆ ಅವರಿಗೆ 1 ಲಕ್ಷ ನಗದು ಪುರಸ್ಕಾರವನ್ನೂ ಗಣರಾಜ್ಯೋತ್ಸವ ಆಚರಣೆಯಂದು ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಇಂದು ತಿಳಿಸಿದೆ.
2017ರ ಜುಲೈ 10ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಟೆಂಗೂ ಎಂಬಲ್ಲಿ ಉಗ್ರರ ತಂಡ ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 14 ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಅಲ್ಲದೆ ಹಲವರು ಗಾಯಗೊಂಡಿದ್ದರು. ಆದರೆ ಬಸ್ ಚಾಲಕ ಗಫೂರ್ ಅವರು ಗುಂಡಿನ ದಾಳಿಯ ನಡುವೆಯೂ ಬಸ್ಸನ್ನೂ ಸುರಕ್ಷಿತ ಸ್ಥಳಕ್ಕೆ ಚಲಾಯಿಸಿಕೊಂಡು ಹೋಗಿ 52 ಮಂದಿ ಪ್ರಾಣ ರಕ್ಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT