ಆರೋಪಿ ಬಂಧನದ (ಸಾಂದರ್ಭಿಕ ಚಿತ್ರ) 
ದೇಶ

ದೆಹಲಿಯಲ್ಲಿ ಕನ್ನಡದ ಚಿತ್ರ ನಿರ್ಮಾಪಕ, ನಟ ಸೋಮಶೇಖರ್ ಬಂಧನ

ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಕರ್ನಾಟಕದ ಚಿತ್ರ ನಿರ್ಮಾಪಕ, ನಟನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿ:  ಗೃಹ ಸಚಿವಾಲಯದ ಹಿರಿಯ ಅಧಿಕಾರಿ ಎಂದು ನಂಬಿಸಿ ಸಾರ್ವಜನಿಕರನ್ನು ವಂಚಿಸುತ್ತಿದ್ದ  ಕರ್ನಾಟಕದ ಚಿತ್ರ ನಿರ್ಮಾಪಕ, ನಟನೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಿವಾಸಿ ಕೆ. ಸೋಮಶೇಖರ್ ಬಂಧಿತ ಆರೋಪಿ. ಗೃಹ ಸಚಿವಾಲಯದ ಉಪ ಕಾರ್ಯದರ್ಶಿ ಸಲ್ಲಿಸಿದ್ದ ದೂರಿನ ಅನ್ವಯ ವಿಶೇಷ ತನಿಖೆ ನಡೆಸಿದ ದೆಹಲಿ ಪೊಲೀಸರು ,ಸೋಮಶೇಖರ್ ಸಹಿ ಇರುವ ಪತ್ರ, ಮತ್ತಿತರ ದಾಖಲೆಗಳನ್ನು  ಪರಿಶೀಲನೆ ನಡೆಸಲಾಗಿದ್ದು,ಅದು ನಕಲಿ ಎಂಬುದು ತಿಳಿದುಬಂದಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸೋಮಶೇಖರ್  ರಾಷ್ಟ್ರೀಯ ಲಾಂಛನವಿರುವ ಲೆಟರ್ ಹೆಡ್ ನಲ್ಲಿ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದಿರುವುದು ತನಿಖೆ ವೇಳೆ  ಬೆಳಕಿಗೆ ಬಂದಿದೆ ಎಂದು ಪೊಲೀಸರು  ಹೇಳಿದ್ದಾರೆ.

ಯಲಹಂಕ ಬಳಿ ಹಲವರು ಎಕರೆ ಜಮೀನು ಹೊಂದಿರುವ ಸೋಮಶೇಖರ್, ಚಿತ್ರೋದ್ಯಮ ಪ್ರವೇಶಿಸಿ ಮೂರು ಸಿನಿಮಾನಗಳನ್ನು ನಿರ್ಮಾಣ ಮಾಡಿದ್ದಾರೆ. ಒಂದು ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿಯೂ ಅಭಿನಯಿಸಿದ್ದಾರೆ. ಆದರೆ, ಆ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ನಷ್ಟ ಅನುಭವಿಸಿದ್ದರಿಂದ ಸುಲಭವಾಗಿ ಹಣ ಗಳಿಸುವ ದೃಷ್ಟಿಯಿಂದ ವಂಚನೆ ಮಾರ್ಗ ಹಿಡಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT