ಎಲ್.ಕೆ.ಅಡ್ವಾಣಿ 
ದೇಶ

ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಂದೂ ಆರ್ ಎಸ್ ಎಸ್ ವಿರೋಧಿಯಾಗಿರಲಿಲ್ಲ: ಎಲ್.ಕೆ. ಅಡ್ವಾಣಿ

ಭಾರತದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಎಂದೂ ಆರ್ ಎಸ್ ಎಸ್ ಬಗೆಗೆ ಅಸಹನೆ ತಾಳಿರಲಿಲ್ಲ.

ನವದೆಹಲಿ: ಭಾರತದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಎಂದೂ ಆರ್ ಎಸ್ ಎಸ್ ಬಗೆಗೆ ಅಸಹನೆ ತಾಳಿರಲಿಲ್ಲ. ಅವರು ಪ್ರಧಾನಿಗಳಾಗಿದ್ದ ಅವಧಿಯಲ್ಲಿ ಆರ್ ಎಸ್ ಎಸ್ ಮುಖಂಡ ಗುರು ಗೋಳ್ವಲ್ಕರ್ ಅವರನ್ನು ತಮ್ಮ ಆಡಳಿತದ ಸಲುವಾಗಿ ಸಲಹೆ ನೀಡುವಂತೆ ಆಹ್ವಾನಿಸಿದ್ದರು ಎಂದು ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹೇಳಿದ್ದಾರೆ.
ಆರ್ ಎಸ್ ಎಸ್ ಹೊರತರುತ್ತಿರುವ ಆರ್ಗನೈಸರ್ ವಾರಪತ್ರಿಕೆಯ ಎಪ್ಪತ್ತನೇ ವಾರ್ಷಿಕ ಆವೃತ್ತಿಯ ಲೇಖನದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವ್ಯಕ್ತಿತ್ವದ ಬಗೆಗೆ ಮೆಚ್ಚುಗೆಯ ಮಾತುಗಳನ್ನು ಬರೆದಿದ್ದಾರೆ. "ನೆಹರು ಅವರಂತೆ, ಶಾಸ್ತ್ರಿ ಜನಸಂಘ ಮತ್ತು ಆರ್ ಎಸ್ ಎಸ್ ಜತೆಗೆ ಯಾವುದೇ ಸೈದ್ಧಾಂತಿಕ ಮನಸ್ತಾಪವನ್ನು ಹೊಂದಿರಲಿಲ್ಲ. ಅವರು ರಾಷ್ಟ್ರೀಯ ಸಮಸ್ಯೆಗಳ ಕುರಿತು ಸಮಾಲೋಚನೆಗಾಗಿ ಶ್ರೀ ಗುರುಜಿ ಅವರನ್ನು ಖುದ್ದು ಆಹ್ವಾನಿಸುತ್ತಿದ್ದರು, 
"ಶಾಸ್ತ್ರಿ ಅವರು ವಾರಕ್ಕೊಮ್ಮೆ ಗುರೂಜಿಯವರನ್ನು ಭೇಟಿಯಾಗುತ್ತಿದ್ದರು, ಪ್ರತಿ ಬಾರಿಯೂ ಪರಿಣಾಮಾತ್ಮಕ ಚರ್ಚೆ ನಡೆಯುತ್ತಿತ್ತು." ಅಡ್ವಾಣಿ ಹೇಳಿಕೊಂಡಿದ್ದಾರೆ.
ಅಡ್ವಾಣಿ ಅವರು 1960 ರಲ್ಲಿ ಸಹಾಯಕ ಸಂಪಾದಕರಾಗಿ ಆರ್ಗನೈಸರ್ ಪತ್ರಿಕೆ ಸೇರಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT