ಮುಂಬೈನಲ್ಲಿ ಕರ್ಣಿ ಸೇನೆಯ 50 ಬೆಂಬಲಿಗರ ಬಂಧನ 
ದೇಶ

ಪದ್ಮಾವತ್ ವಿವಾದ: ಮುಂಬೈನಲ್ಲಿ ಕರ್ಣಿ ಸೇನೆಯ 50 ಬೆಂಬಲಿಗರ ಬಂಧನ

ಸಾಕಷ್ಟು ಚರ್ಚೆಗೆ, ವಿವಾದಕ್ಕೆ ಕಾರಣವಾಗಿರುವ ಸಂಜಯ್ ಲೀಲಾ ಭನ್ಸಾಲಿಯವರ ಚಿತ್ರ ಪದ್ಮಾವತ್ ನಾಳೆ ತೆರೆ ಕಾಣಲಿದೆ.

ಮುಂಬೈ: ಸಾಕಷ್ಟು ಚರ್ಚೆಗೆ, ವಿವಾದಕ್ಕೆ ಕಾರಣವಾಗಿರುವ ಸಂಜಯ್ ಲೀಲಾ ಭನ್ಸಾಲಿಯವರ ಚಿತ್ರ ಪದ್ಮಾವತ್ ನಾಳೆ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕರ್ಣಿ ಸೇನಾ ಬೆಂಬಲಿಗರಾದ ಸುಮಾರು ಐವತ್ತು ಜನರನ್ನು ಮುಂಬೈ ಪೋಲೀಸರು ಬಂಧಿಸಿದ್ದಾರೆ.
"ನಾವು ಮುಂಬೈನ ವಿವಿಧ ಭಾಗಗಳಲ್ಲಿ ಸುಮಾರು 50 ಕರ್ಣಿ ಸೇನಾ ಬೆಂಬಲಿಗರನ್ನು ಬಂಧಿಸಿದ್ದೇವೆ, ಅವರು ಚಿತ್ರದ ವಿರುದ್ಧ ಪ್ರತಿಭಟಿಸಲು ಸಿದ್ದರಾಗಿದ್ದಾಗ ಅವರನ್ನು ಬಂಧಿಸಲಾಯಿತು" ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಹೇಳಿದರು. ಪ್ರತಿಭಟನೆ ಕಾವು ಹೆಚ್ಚಾಗಿದ್ದ ಪಕ್ಷದಲ್ಲಿ ಇನ್ನಷ್ಟು ಜನರನ್ನು ವಶಕ್ಕೆ ಪಡೆಯಲಾಗುತ್ತದೆ ಎಂಡು ಅವರು ಹೇಳಿದ್ದಾರೆ. 
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಹಾಗೂ ಶಾಹೀದ್ ಕಪೂರ್ ನಟಿಸಿದ್ದ ಈ ಚಿತ್ರ ಹದಿಮೂರನೇ ಶತಮಾನದ ರಜಪೂತ್ ರಾಣಿ ಪದ್ಮಿನಿಯ ಕಥೆಯನ್ನು ಹೊಂದಿದೆ ಎನ್ನಲಾಗಿದೆ.  ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ನೀಡಿ ಕಳೆದ ವಾರ ದೇಶದ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT