ಮುಂಬೈನಲ್ಲಿ ಕರ್ಣಿ ಸೇನೆಯ 50 ಬೆಂಬಲಿಗರ ಬಂಧನ 
ದೇಶ

ಪದ್ಮಾವತ್ ವಿವಾದ: ಮುಂಬೈನಲ್ಲಿ ಕರ್ಣಿ ಸೇನೆಯ 50 ಬೆಂಬಲಿಗರ ಬಂಧನ

ಸಾಕಷ್ಟು ಚರ್ಚೆಗೆ, ವಿವಾದಕ್ಕೆ ಕಾರಣವಾಗಿರುವ ಸಂಜಯ್ ಲೀಲಾ ಭನ್ಸಾಲಿಯವರ ಚಿತ್ರ ಪದ್ಮಾವತ್ ನಾಳೆ ತೆರೆ ಕಾಣಲಿದೆ.

ಮುಂಬೈ: ಸಾಕಷ್ಟು ಚರ್ಚೆಗೆ, ವಿವಾದಕ್ಕೆ ಕಾರಣವಾಗಿರುವ ಸಂಜಯ್ ಲೀಲಾ ಭನ್ಸಾಲಿಯವರ ಚಿತ್ರ ಪದ್ಮಾವತ್ ನಾಳೆ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕರ್ಣಿ ಸೇನಾ ಬೆಂಬಲಿಗರಾದ ಸುಮಾರು ಐವತ್ತು ಜನರನ್ನು ಮುಂಬೈ ಪೋಲೀಸರು ಬಂಧಿಸಿದ್ದಾರೆ.
"ನಾವು ಮುಂಬೈನ ವಿವಿಧ ಭಾಗಗಳಲ್ಲಿ ಸುಮಾರು 50 ಕರ್ಣಿ ಸೇನಾ ಬೆಂಬಲಿಗರನ್ನು ಬಂಧಿಸಿದ್ದೇವೆ, ಅವರು ಚಿತ್ರದ ವಿರುದ್ಧ ಪ್ರತಿಭಟಿಸಲು ಸಿದ್ದರಾಗಿದ್ದಾಗ ಅವರನ್ನು ಬಂಧಿಸಲಾಯಿತು" ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಹೇಳಿದರು. ಪ್ರತಿಭಟನೆ ಕಾವು ಹೆಚ್ಚಾಗಿದ್ದ ಪಕ್ಷದಲ್ಲಿ ಇನ್ನಷ್ಟು ಜನರನ್ನು ವಶಕ್ಕೆ ಪಡೆಯಲಾಗುತ್ತದೆ ಎಂಡು ಅವರು ಹೇಳಿದ್ದಾರೆ. 
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಹಾಗೂ ಶಾಹೀದ್ ಕಪೂರ್ ನಟಿಸಿದ್ದ ಈ ಚಿತ್ರ ಹದಿಮೂರನೇ ಶತಮಾನದ ರಜಪೂತ್ ರಾಣಿ ಪದ್ಮಿನಿಯ ಕಥೆಯನ್ನು ಹೊಂದಿದೆ ಎನ್ನಲಾಗಿದೆ.  ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ನೀಡಿ ಕಳೆದ ವಾರ ದೇಶದ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT