ಗೋವಾ ಸಚಿವ ವಿನೋದ್ ಪಾಲ್ಯೆಕರ್ 
ದೇಶ

ಮಹದಾಯಿ ಜಲಾನಯನ ಪ್ರದೇಶದ ಕಾಮಗಾರಿ ಮೇಲ್ವಿಚಾರಣೆಗೆ ವಿಶೇಷ ತಂಡ ರಚಿಸಿದ ಗೋವಾ

ರಾಜ್ಯದಲ್ಲಿ ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಗೋವಾ ಸರ್ಕಾರ....

ಪಣಜಿ: ರಾಜ್ಯದಲ್ಲಿ ಮಹದಾಯಿ ನದಿ ನೀರಿಗಾಗಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಗೋವಾ ಸರ್ಕಾರ ಮಹದಾಯಿ ನದಿ ಜಲಾನಯನ ಪ್ರದೇಶದಲ್ಲಿ ಕರ್ನಾಟಕ ಅಥವಾ ಮಹಾರಾಷ್ಟ್ರ ಕಾಲುವೆ ನಿರ್ಮಾಣ ಕಾಮಗಾರಿ ಮುಂದುವರೆಸಿವೆಯೇ ಎಂಬುದರ ಬಗ್ಗೆ ಮೇಲ್ವಿಚಾರಣೆ ನಡೆಸಲು ಗುರುವಾರ ವಿಶೇಷ ತಂಡ ರಚಿಸಿದೆ.
ಈ ಸಂಬಂಧ ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್ ಪಾಲ್ಯೆಕರ್ ಅವರು ಆದೇಶ ಹೊರಡಿಸಿದ್ದು, ಗಡಿ ಭಾಗದಲ್ಲಿ ಕರ್ನಾಟಕ ಕೈಗೊಂಡಿರುವ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಸ್ಥಳಕ್ಕೆ ವಾರದಲ್ಲಿ ಕನಿಷ್ಠ ಎರಡು ಬಾರಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ನಾಲ್ವರು ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ.
ಮಹದಾಯಿ ನದಿ ನೀರಿನ ತಿರುವು ಬದಲಿಸುವುದಾಗಿ ಕರ್ನಾಟಕ ಅಥವಾ ಮಹಾರಾಷ್ಟ್ರ ಯಾವುದೇ ಕಾಮಗಾರಿ ಕೈಗೊಂಡರು ಅದನ್ನು ತಕ್ಷಣ ಸರ್ಕಾರದ ಗಮನಕ್ಕೆ ತರಬೇಕು ಎಂದು ಮೇಲ್ವಿಚಾರಣೆ ತಂಡಕ್ಕೆ ಪಾಲ್ಯೆಕರ್ ಆದೇಶಿಸಿದ್ದಾರೆ.
ಈ ವಿಶೇಷ ತಂಡದಲ್ಲಿ ಇಬ್ಬರು ಇಂಜಿನಿಯರ್ ಗಳು, ಓರ್ವ ಸರ್ವೇಯರ್ ಹಾಗೂ ಓರ್ವ ತಾಂತ್ರಿಕ ಸಹಾಯಕರಿದ್ದಾರೆ.
ಇತ್ತೀಚಿಗೆ ವಿನೋದ್ ಪಾಲ್ಯೆಕರ್ ಅವರು ಬೆಳಗಾವಿ ಜಿಲ್ಲೆಯ ಕಣಕುಂಬಿಗೆ ಭೇಟಿ ನೀಡಿ, ಕರ್ನಾಟಕದ ಕಾಮಗಾರಿ ಪರಿಶೀಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT