ಅರವಿಂದ್ ಕೇಜ್ರಿವಾಲ್ 
ದೇಶ

ಮುಸ್ಲಿಂ, ದಲಿತರ ಹತ್ಯೆ ಆಯ್ತು, ಇದೀಗ ಮಕ್ಕಳ ಮೇಲೆ ದೌರ್ಜನ್ಯ ನಾಚಿಕೆಗೇಡು: ಕೇಜ್ರಿವಾಲ್

ವಿವಾದಿತ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ವೇಳೆ ಕರ್ಣಿ ಸೇನೆಯ ಕಾರ್ಯಕರ್ತರು ಗುರುಗ್ರಾಮದ ಶಾಲಾ ಬಸ್ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ...

ನವದೆಹಲಿ: ವಿವಾದಿತ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ವೇಳೆ ಕರ್ಣಿ ಸೇನೆಯ ಕಾರ್ಯಕರ್ತರು ಗುರುಗ್ರಾಮದ ಶಾಲಾ ಬಸ್ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. 
ಮುಸ್ಲಿಂರ ಹತ್ಯೆ, ದಲಿತರ ಹತ್ಯೆ ಆದಾಗಲೂ ಸಹಿಸಿಕೊಂಡಿದ್ದೇವೆ. ಆದರೆ ಮಕ್ಕಳ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ದುಷ್ಕರ್ಮಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕರ್ಣಿ ಸೇನೆಗೆ ಅರವಿಂದ್ ಕೇಜ್ರಿವಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. 
ಛತ್ರಸಾಲಾ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಅವರು, ಮಕ್ಕಳ ಮೇಲೆ ದಾಳಿ ನಡೆಸುವವರಿಗೆ ನಾಚಿಕೆಯಾಗಬೇಕು. ರಾಮನ ಭೂಮಿ ಭಾರತ. ಮಕ್ಕಳ ಮೇಲೆ ದಾಳಿ ನಡೆಸುವಂತಹ ಅಮಾನವೀಯತೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. 
ಗಣ ರಾಜ್ಯೋತ್ಸವದ ಸಂದರ್ಭದಲ್ಲಿ ಮಕ್ಕಳ ಮೇಲಿನ ದಾಳಿಯಂತಹ ಕೃತ್ಯಗಳು ನಡೆದಿದ್ದು ನಾಚಿಕೆಗೇಡು. ಇದೊಂದು ದುರಾದೃಷ್ಟಕರ ಘಟನೆ. ಶಾಲಾ ವಾಹನದ ಮೇಲೆ ದಾಳಿ ನಡೆಸಿ ಮಕ್ಕಳಲ್ಲಿ ಭೀತಿ ಹುಟ್ಟಿಸಿದ ಕೃತ್ಯದ ಬಗ್ಗೆ ಕೇಳಿ ಕಳೆದ ರಾತ್ರಿ ನಿದ್ರೆಯೇ ಬರಲಿಲ್ಲ ಎಂದು ಹೇಳಿದರು. 
ನಾನು ಹಿಂದು. ನಾನು ರಾಮ ಭಕ್ತ. ರಾಮ ಯಾವತ್ತಾದರೂ ಮಕ್ಕಳ ಮೇಲೆ ದಾಳಿ ನಡೆಸಲು ಅವಕಾಶ ನೀಡುತ್ತಾನೆಯೇ ಎಂದು ಪ್ರಶ್ನಿಸಿದ್ದಾರೆ. 
ಭರತ ಭೂಮಿಯಲ್ಲಿ ರಾಮ, ಕೃಷ್ಣ, ಗೌತಮ ಬುದ್ಧ, ಮಹಾವೀರ ಜೈನ್, ಗುರು ನಾನಕ್ ದೇವ್, ಕಬೀರ, ಮಹಾತ್ಮ ಗಾಂಧಿ, ಪ್ರವಾದಿ ಮೊಹಮ್ಮದ್, ಜೀಸಸ್ ರಂತ ಮಹಾನ್ ಪುರುಷರು ಶಾಂತಿಯನ್ನೇ ಪ್ರತಿಪಾದಿಸಿದರು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT