ಹರಿಯಾಣದ ಗುರುಗ್ರಾಮ್ ನಲ್ಲಿ ನಿನ್ನೆ ಉದ್ರಿಕ್ತ ಪ್ರತಿಭಟನಾಕಾರರು ಶಾಲಾ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ ಚಿತ್ರ 
ದೇಶ

'ಪದ್ಮಾವತ್' ವಿವಾದ: ದೆಹಲಿ, ನೋಯ್ಡಾ, ಗುರುಗ್ರಾಮಗಳ ಶಾಲೆಗಳಿಗೆ ರಜೆ

ತೀವ್ರ ವಿರೋಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ದೀಪಿಕಾ ಪಡುಕೋಣೆ ಅಭಿಯನದ ಪದ್ಮಾವತ್ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ದೆಹಲಿ: ತೀವ್ರ ವಿರೋಧದ ನಡುವೆಯೂ ಪೊಲೀಸ್ ಭದ್ರತೆಯಲ್ಲಿ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ದೀಪಿಕಾ ಪಡುಕೋಣೆ ಅಭಿಯನದ ಪದ್ಮಾವತ್ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಚಿತ್ರ ಬಿಡುಗಡೆ ವಿರೋಧಿಸಿ ಕರ್ನಿ ಸೇನಾ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ  ಚಿತ್ರದಲ್ಲಿನ ಕೆಲ ದೃಶ್ಯಗಳಿಗೆ ಕತ್ತರಿ ಹಾಕಿ ಚಿತ್ರದ ಟೈಟಲ್ ಬದಲಾವಣೆ ಮಾಡಿ ಬಿಡುಗಡೆ ಮಾಡಲಾಗಿದೆ.

ಆದಾಗ್ಯೂ, ಈ ಸಮುದಾಯ ಪ್ರಾಬಲ್ಯ ಹೊಂದಿರುವ ರಾಜ್ಯಗಳಾದ ರಾಜಸ್ತಾನ, ಮಧ್ಯಪ್ರದೇಶ, ಗುಜರಾತ್ ಹಾಗೂ ಗೋವಾ ರಾಜ್ಯಗಳಲ್ಲಿ ಚಿತ್ರ ಪ್ರದರ್ಶಿಸದಿರಲು ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಮಾಲೀಕರು ನಿರ್ಧರಿಸಿದ್ದಾರೆ.


ಪದ್ಮಾವತ್ ಚಿತ್ರ ಬಿಡುಗಡೆಗೆ ಆಗ್ರಹಿಸಿ ಹರಿಯಾಣದ ಗುರುಗ್ರಾಮದಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ದುಷ್ಕರ್ಮಿಗಳು ಶಾಲಾ ಬಸ್ ವೊಂದಕ್ಕೆ  ಬೆಂಕಿ ಹಚ್ಚಿದ್ದರಿಂದ ಇಂದು ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಗುರುಗ್ರಾಮ, ನೋಯ್ಡಾದಲ್ಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉದ್ರಿಕ್ತ ಪ್ರತಿಭಟನಾಕಾರರು  ಜಿ.ಡಿ. ಗೋಯಂಕಾ ವರ್ಲ್ಡ್  ಶಾಲೆಯ ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದರು. ಶಿಕ್ಷಕರು ಭಯಭೀತಗೊಂಡಿದ್ದ ವಿದ್ಯಾರ್ಥಿಗಳನ್ನು ಬಸ್ಸಿನ ಸೀಟಿನ ಕೆಳಗೆ ಕುಳಿರಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದರು.

ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯನ್ನು  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರು ತೀವ್ರವಾಗಿ ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT