ಸಂಗ್ರಹ ಚಿತ್ರ 
ದೇಶ

ಪದ್ಮಾವತ್ ವಿವಾದ: 4 ರಾಜ್ಯ, ಕರ್ಣಿ ಸೇನೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ 'ಸುಪ್ರೀಂ' ಒಪ್ಪಿಗೆ

ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ...

ನವದೆಹಲಿ: ತೀವ್ರ ವಿರೋಧಕ್ಕೆ ಕಾರಣವಾಗಿರುವ ಪದ್ಮಾವತ್ ಚಿತ್ರ ಸಂಬಂಧ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ಕರ್ಣಿಸೇನಾ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಗಳ ವಿರುದ್ಧ ದಾಖಲಾಗಿರುವ ಒಟ್ಟು 2 ನ್ಯಾಯಾಂಗ ನಿಂದನೆ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಪದ್ಮಾವತ್ ಚಿತ್ರ ಸಂಬಂಧ ಈ ಹಿಂದೆಯೇ ಸುಪ್ರೀಂ ಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದರ ಹೊರತಾಗಿಯೂ ನಡೆಯುತ್ತಿರುವ ಪ್ರತಿಭಟಗಳ ವಿರುದ್ಧ ಸರ್ವೋಚ್ಛ ನ್ಯಾಯಾಲಯ ತನ್ನ ಆಕ್ರೋಶ ವ್ಯಕ್ತಪಡಿಸಿದೆ.  ಪ್ರಮುಖವಾಗಿ ಮಿತಿ ಮೀರಿದ ಕರ್ಣಿ ಸೇನಾ ಪ್ರತಿಭಟನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜಸ್ಥಾನ, ಹರಿಯಾಣ, ಗುಜರಾತ್ ಮತ್ತು ಮಧ್ಯಪ್ರದೇಶ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್ ತನ್ನ  ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ದಾಖಲಾಗಿರುವ ನ್ಯಾಯಾಂದ ನಿಂದನೆ ಪ್ರಕರಣದ ವಿಚಾರಣೆಯನ್ನು ಸರ್ವೋಚ್ಥ ನ್ಯಾಯಾಲಯ ಇಂದು ನಡೆಸಲಿದೆ.
ಈ ಹಿಂದೆ ಕಾಂಗ್ರೆಸ್ ಮುಖಂಡ ಚೆಹ್ಸೀನ್ ಪೂನಾಲಾ ಅವರು ಕಳೆದ ಸೋಮವಾರ ಕರ್ಣಿ ಸೇನಾ ಹಾಗೂ ನಾಲ್ಕು ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ಕುರಿತು  ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ. ಅಲ್ಲದೆ ಪದ್ಮಾವತ್ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕರ್ಣಿ ಸೇನಾ ಮತ್ತು ರಾಜಸ್ಥಾನ, ಹರಿಯಾಣ, ಗುಜರಾತ್  ಮತ್ತು ಮಧ್ಯಪ್ರದೇಶ ಸರ್ಕಾರಗಳ ವಿರುದ್ಧ ದಾಖಲಾಗಿರುವ ಅರ್ಜಿಗಳನ್ನೂ ಕೂಡ ವಿಚಾರಣೆಗೆ ತೆಗೆದುಕೊಳ್ಳಲಿದೆ.
ವಾರಣಾಸಿಯಲ್ಲಿ ವ್ಯಕ್ತಿಯಿಂದ ಆತ್ಮಾಹುತಿಗೆ ಯತ್ನ
ಏತನವ್ಮಧ್ಯೆ ಪದ್ಮಾವತ್ ಚಿತ್ರ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿ ವಾರಣಾಸಿಯಲ್ಲಿ ವ್ಯಕ್ತಿಯೋರ್ವ ಆತ್ಮಾಹುತಿಗೆ ಯತ್ನಿಸಿದ ಘಟನೆ ನಡೆದಿದೆ. ಪ್ರಸ್ತುತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನನ್ನು ಬಂಧಿಸಿ  ಜೈಲಿಗಟ್ಟಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT