ರಾಮನಾಥ್ ಕೊವಿಂದ್ 
ದೇಶ

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 'ನಮ್ಮ ಜನ ಪ್ರಜಾಪ್ರಭುತ್ವ ನಿರ್ಮಾಪಕರು ಮಾತ್ರವಲ್ಲ, ಅದರ ಆಧಾರ ಸ್ಥಂಭ'

ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್...

ನವದೆಹಲಿ: ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗುರುವಾರ ಹೇಳಿದ್ದಾರೆ.
ನಾಳೆ 69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನ ಪ್ರಜಾಪ್ರಭುತ್ವದ ಭುನಾದಿ ಇದ್ದಂತೆ. ಇಡೀ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.
ದೇಶಕ್ಕಾಗಿ ಪ್ರಾಣ ತ್ಯಾಗಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ದಿನ ಇದು. ಅವರಿಗೆ ನನ್ನ ನಮನ. ದೇಶದ ಎಲ್ಲಾ ಸೈನಿಕರಿಗೆ, ವೈದ್ಯರಿಗೆ, ರೈತರಿಗೆ, ವಿಜ್ಞಾನಿಗಳಿಗೆ, ಇಂಜಿನಿಯರ್ ಗಳಿಗೆ ಮತ್ತು ಈ ದೇಶದ ತಾಯಂದಿರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಭಾರತದ ಶೇ.60ರಷ್ಟು ನಾಗರಿಕರು 35 ವರ್ಷದೊಳಗಿನವರಾಗಿದ್ದು, ಅವರೇ ಈ ದೇಶದ ಭವಿಷ್ಯ. ಅವರು ಸರ್ಕಾರ ಉತ್ತರ ಶಿಕ್ಷಣಕ್ಕಾಗಿ ನೀಡಿರುವ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ದೇಶದ ಶ್ರೀಮಂತರಿಗೆ ರಾಮನಾಥ್ ಕೊವಿಂದ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT