ರಾಮನಾಥ್ ಕೊವಿಂದ್ 
ದೇಶ

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 'ನಮ್ಮ ಜನ ಪ್ರಜಾಪ್ರಭುತ್ವ ನಿರ್ಮಾಪಕರು ಮಾತ್ರವಲ್ಲ, ಅದರ ಆಧಾರ ಸ್ಥಂಭ'

ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್...

ನವದೆಹಲಿ: ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗುರುವಾರ ಹೇಳಿದ್ದಾರೆ.
ನಾಳೆ 69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನ ಪ್ರಜಾಪ್ರಭುತ್ವದ ಭುನಾದಿ ಇದ್ದಂತೆ. ಇಡೀ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.
ದೇಶಕ್ಕಾಗಿ ಪ್ರಾಣ ತ್ಯಾಗಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ದಿನ ಇದು. ಅವರಿಗೆ ನನ್ನ ನಮನ. ದೇಶದ ಎಲ್ಲಾ ಸೈನಿಕರಿಗೆ, ವೈದ್ಯರಿಗೆ, ರೈತರಿಗೆ, ವಿಜ್ಞಾನಿಗಳಿಗೆ, ಇಂಜಿನಿಯರ್ ಗಳಿಗೆ ಮತ್ತು ಈ ದೇಶದ ತಾಯಂದಿರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಭಾರತದ ಶೇ.60ರಷ್ಟು ನಾಗರಿಕರು 35 ವರ್ಷದೊಳಗಿನವರಾಗಿದ್ದು, ಅವರೇ ಈ ದೇಶದ ಭವಿಷ್ಯ. ಅವರು ಸರ್ಕಾರ ಉತ್ತರ ಶಿಕ್ಷಣಕ್ಕಾಗಿ ನೀಡಿರುವ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ದೇಶದ ಶ್ರೀಮಂತರಿಗೆ ರಾಮನಾಥ್ ಕೊವಿಂದ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT