ರಾಮನಾಥ್ ಕೊವಿಂದ್ 
ದೇಶ

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 'ನಮ್ಮ ಜನ ಪ್ರಜಾಪ್ರಭುತ್ವ ನಿರ್ಮಾಪಕರು ಮಾತ್ರವಲ್ಲ, ಅದರ ಆಧಾರ ಸ್ಥಂಭ'

ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್...

ನವದೆಹಲಿ: ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗುರುವಾರ ಹೇಳಿದ್ದಾರೆ.
ನಾಳೆ 69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನ ಪ್ರಜಾಪ್ರಭುತ್ವದ ಭುನಾದಿ ಇದ್ದಂತೆ. ಇಡೀ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.
ದೇಶಕ್ಕಾಗಿ ಪ್ರಾಣ ತ್ಯಾಗಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ದಿನ ಇದು. ಅವರಿಗೆ ನನ್ನ ನಮನ. ದೇಶದ ಎಲ್ಲಾ ಸೈನಿಕರಿಗೆ, ವೈದ್ಯರಿಗೆ, ರೈತರಿಗೆ, ವಿಜ್ಞಾನಿಗಳಿಗೆ, ಇಂಜಿನಿಯರ್ ಗಳಿಗೆ ಮತ್ತು ಈ ದೇಶದ ತಾಯಂದಿರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಭಾರತದ ಶೇ.60ರಷ್ಟು ನಾಗರಿಕರು 35 ವರ್ಷದೊಳಗಿನವರಾಗಿದ್ದು, ಅವರೇ ಈ ದೇಶದ ಭವಿಷ್ಯ. ಅವರು ಸರ್ಕಾರ ಉತ್ತರ ಶಿಕ್ಷಣಕ್ಕಾಗಿ ನೀಡಿರುವ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ದೇಶದ ಶ್ರೀಮಂತರಿಗೆ ರಾಮನಾಥ್ ಕೊವಿಂದ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT