ರಾಮನಾಥ್ ಕೊವಿಂದ್ 
ದೇಶ

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 'ನಮ್ಮ ಜನ ಪ್ರಜಾಪ್ರಭುತ್ವ ನಿರ್ಮಾಪಕರು ಮಾತ್ರವಲ್ಲ, ಅದರ ಆಧಾರ ಸ್ಥಂಭ'

ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್...

ನವದೆಹಲಿ: ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗುರುವಾರ ಹೇಳಿದ್ದಾರೆ.
ನಾಳೆ 69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನ ಪ್ರಜಾಪ್ರಭುತ್ವದ ಭುನಾದಿ ಇದ್ದಂತೆ. ಇಡೀ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.
ದೇಶಕ್ಕಾಗಿ ಪ್ರಾಣ ತ್ಯಾಗಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ದಿನ ಇದು. ಅವರಿಗೆ ನನ್ನ ನಮನ. ದೇಶದ ಎಲ್ಲಾ ಸೈನಿಕರಿಗೆ, ವೈದ್ಯರಿಗೆ, ರೈತರಿಗೆ, ವಿಜ್ಞಾನಿಗಳಿಗೆ, ಇಂಜಿನಿಯರ್ ಗಳಿಗೆ ಮತ್ತು ಈ ದೇಶದ ತಾಯಂದಿರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಭಾರತದ ಶೇ.60ರಷ್ಟು ನಾಗರಿಕರು 35 ವರ್ಷದೊಳಗಿನವರಾಗಿದ್ದು, ಅವರೇ ಈ ದೇಶದ ಭವಿಷ್ಯ. ಅವರು ಸರ್ಕಾರ ಉತ್ತರ ಶಿಕ್ಷಣಕ್ಕಾಗಿ ನೀಡಿರುವ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ದೇಶದ ಶ್ರೀಮಂತರಿಗೆ ರಾಮನಾಥ್ ಕೊವಿಂದ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?