ರಾಮನಾಥ್ ಕೊವಿಂದ್ 
ದೇಶ

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: 'ನಮ್ಮ ಜನ ಪ್ರಜಾಪ್ರಭುತ್ವ ನಿರ್ಮಾಪಕರು ಮಾತ್ರವಲ್ಲ, ಅದರ ಆಧಾರ ಸ್ಥಂಭ'

ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್...

ನವದೆಹಲಿ: ನಮ್ಮ ದೇಶದ ಜನ ಪ್ರಜಾಪ್ರಭುತ್ವದ ನಿರ್ಮಾಪಕರು ಮಾತ್ರವಲ್ಲ. ಅದರ ಆಧಾರ ಸ್ಥಂಭವಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗುರುವಾರ ಹೇಳಿದ್ದಾರೆ.
ನಾಳೆ 69ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನ ಪ್ರಜಾಪ್ರಭುತ್ವದ ಭುನಾದಿ ಇದ್ದಂತೆ. ಇಡೀ ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು.
ದೇಶಕ್ಕಾಗಿ ಪ್ರಾಣ ತ್ಯಾಗಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನೆಯುವ ದಿನ ಇದು. ಅವರಿಗೆ ನನ್ನ ನಮನ. ದೇಶದ ಎಲ್ಲಾ ಸೈನಿಕರಿಗೆ, ವೈದ್ಯರಿಗೆ, ರೈತರಿಗೆ, ವಿಜ್ಞಾನಿಗಳಿಗೆ, ಇಂಜಿನಿಯರ್ ಗಳಿಗೆ ಮತ್ತು ಈ ದೇಶದ ತಾಯಂದಿರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಭಾರತದ ಶೇ.60ರಷ್ಟು ನಾಗರಿಕರು 35 ವರ್ಷದೊಳಗಿನವರಾಗಿದ್ದು, ಅವರೇ ಈ ದೇಶದ ಭವಿಷ್ಯ. ಅವರು ಸರ್ಕಾರ ಉತ್ತರ ಶಿಕ್ಷಣಕ್ಕಾಗಿ ನೀಡಿರುವ ವಿವಿಧ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ರಾಷ್ಟ್ರಪತಿಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೂ ದೇಶದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಅಗತ್ಯವಿರುವವರಿಗೆ ಸಹಾಯ ಮಾಡಿ ಎಂದು ದೇಶದ ಶ್ರೀಮಂತರಿಗೆ ರಾಮನಾಥ್ ಕೊವಿಂದ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT