ದೆಹಲಿಯ ಅಮರ್ ಜ್ಯೋತಿಯಲ್ಲಿ ದೇಶದ ಮೂರು ಸೇನೆಗಳ ಮುಖ್ಯಸ್ಥರೊಂದಿಗೆ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ 
ದೇಶ

69ನೇ ಗಣರಾಜ್ಯೋತ್ಸವ:ಹುತಾತ್ಮ ಯೋಧರಿಗೆ ಗೌರವ ನಮನ, ಆಸಿಯಾನ್ ನಾಯಕರು ಭಾಗಿ

ಅಭೂತಪೂರ್ವ ಭದ್ರತೆಯೊಂದಿಗೆ ಆಸಿಯಾನ್ ದೇಶಗಳ 10 ನಾಯಕರ ಉಪಸ್ಥಿತಿಯಲ್ಲಿ ದೆಹಲಿಯ ರಾಜಪಥ್ ನಲ್ಲಿ ದೇಶದ 69ನೇ ಗಣರಾಜ್ಯೋತ್ಸವ .....

ನವದೆಹಲಿ: ಅಭೂತಪೂರ್ವ ಭದ್ರತೆಯೊಂದಿಗೆ ಆಸಿಯಾನ್ ದೇಶಗಳ 10 ನಾಯಕರ ಉಪಸ್ಥಿತಿಯಲ್ಲಿ ದೆಹಲಿಯ ರಾಜಪಥ್ ನಲ್ಲಿ ದೇಶದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ನಂತರ ಆಕರ್ಷಕ ಪಥಸಂಚಲನ ನಡೆಯಿತು. 
ಪ್ರಧಾನ ಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮ್ ಮತ್ತು ಮೂವರು ಅತಿಥಿಗಳ ಸಮ್ಮುಖದಲ್ಲಿ ಹುತಾತ್ಮ ಯೋಧರಿಗೆ ಅಮರ್ ಜ್ಯೋತಿಯಲ್ಲಿ ಗೌರವ ನಮನ ಸಲ್ಲಿಸಿದರು.
ಇದೀಗ ದೆಹಲಿಯ ರಾಜಪಥ್ ನಲ್ಲಿ ದೇಶದ ಶ್ರೀಮಂತ ಸಂಸ್ಕೃತಿ, ಕಲೆ ಮತ್ತು ಮಿಲಿಟರಿ ಸಾಮರ್ಥ್ಯಗಳನ್ನು ಮೆರೆಯುವ ಅನೇಕ ಪ್ರದರ್ಶನಗಳು ನಡೆಯುತ್ತಿವೆ. ಜನರು ಅದನ್ನು ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.
ಇಂದಿನ ಗಣರಾಜ್ಯೋತ್ಸವ ದಿನದ ಮತ್ತೊಂದು ಆಕರ್ಷಣೆ ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತ ದೇಶದ ಐತಿಹಾಸಿಕ, ನಾಗರಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ತೋರಿಸುವ ಸ್ಥಬ್ಧಚಿತ್ರಗಳು.

ಇದೀಗ ವಿವಿಧ ರಾಜ್ಯಗಳು ತಮ್ಮ ಭೌಗೋಳಿಕ, ಸಾಂಸ್ಕೃತಿರ ವೈವಿಧ್ಯಗಳನ್ನು ತೋರಿಸುವ ಸ್ಥಬ್ಧಚಿತ್ರಗಳು ಸಾಗುತ್ತಿವೆ. ಈ ಬಾರಿ ಕರ್ನಾಟಕದ ವನ್ಯಮೃಗಗಳನ್ನು ವೈಭವವನ್ನು ತೋರಿಸುವ ಸ್ಥಬ್ಧಚಿತ್ರ ದೆಹಲಿಯ ರಾಜಪಥ್ ನಲ್ಲಿ ಪ್ರದರ್ಶನಗೊಂಡಿದೆ.
ಈ ವರ್ಷ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಬ್ಧಚಿತ್ರಗಳ ಮೂಲಕ ಸಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel