ಸಂಗ್ರಹ ಚಿತ್ರ 
ದೇಶ

69ನೇ ಗಣರಾಜ್ಯೋತ್ಸವ: ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಶ್ರೀನಗರ: 69ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿರುವ ಭಾರತದ ಸಂಭ್ರಮಕ್ಕೆ ಉಗ್ರರು ಮತ್ತು ಇತರೆ ದುಷ್ಕರ್ಮಿಗಳು ಅಡ್ಡಿ ಪಡಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಕಾಶ್ಮೀರದ ಉಗ್ರ ಪೀಡಿತ ಜಿಲ್ಲೆಗಳಾದ ಪುಲ್ವಾಮ, ಅನಂತ್ ನಾಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಸೂಕ್ಷ್ಮ ಮತ್ತು ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪಡೆಗಳನ್ನು  ನಿಯೋಜನೆ ಮಾಡಲಾಗಿದೆ. ನಿನ್ನೆಯಿಂದಲೇ ಮೊಬೈಲ್ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಗಣರಾಜ್ಯೋತ್ಸವ ಮತ್ತು ಸ್ವತಂತ್ರ್ಯ ದಿನಾಚರಣೆ ಸಂಭ್ರಮದ ವೇಳೆ ಇಂಟರ್ ನೆಟ್ ಸೇವೆ ಸ್ಥಗಿತ ಸಾಮಾನ್ಯವಾಗಿದೆ  ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಕಾಶ್ಮೀರದಲ್ಲಿ ಗಣರಾಜ್ಯೋತ್ಸ ಕಾರ್ಯಕ್ರಮ ನಡೆಯಲಿರುವ ಶ್ರೀನಗರದ ಶೇರ್ ಇ ಕಾಶ್ಮೀರ ಕ್ರಿಕೆಟ್ ಮೈದಾನಕ್ಕೆ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಮುಖ್ಯಮಂತ್ರಿ ಮುಫ್ತಿ ಮೆಹಬೂಬಾ ಅವರು ಇಂದು ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲಿದ್ದಾರೆ.
ಗಡಿಯಲ್ಲಿ ಹೆಚ್ಚುವರಿ ಪಡೆಗಳ ನಿಯೋಜನೆ
ಇನ್ನು ಇತ್ತೀಚೆಗಷ್ಟೇ ಪ್ರಕ್ಷುಬ್ಧವಾಗಿದ್ದ ಇಂಡೋ-ಪಾಕ್ ಕೊಂಚ ಶಾಂತವಾಗಿದ್ದು, ಗಣರಾಜ್ಯೋತ್ಸವ ನಿಮಿತ್ತ ಮತ್ತೆ ಪಾಕ್ ಸೈನಿಕರು ಭಾರತವನ್ನು ಕೆಣಕುವ ಸಾಧ್ಯತೆ ಇರುವುದರಿಂದ ಗಡಿಯಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜನೆ  ಮಾಡಲಾಗಿದೆ. ಶಾರ್ಪ್ ಶೂಟರ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗಡಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT