ಧ್ವಜಾರೋಹಣ ನೆರವೇರಿಸಿದ ಮೋಹನ್ ಭಾಗ್ವತ್ 
ದೇಶ

69ನೇ ಗಣರಾಜ್ಯೋತ್ಸವ: ಕೇರಳ ಸರ್ಕಾರಕ್ಕೆ ಸಡ್ಡು ಹೊಡೆದ ಭಾಗ್ವತ್ ರಿಂದ ತ್ರಿವರ್ಣ ಧ್ವಜಾರೋಹಣ

ಗಣರಾಜ್ಯೋತ್ಸವ ದಿನದಂದ ತ್ರಿವರ್ಣ ಧ್ವಜಾರೋಹಣ ಸಂಬಂಧ ಕೇರಳ ಸರ್ಕಾರ ಹೊರಡಿಸಿದ್ದ ಸುತ್ತೋಲೆಯ ಹೊರತಾಗಿಯೂ, ಸಿಎಂ ಪಿಣರಾಯಿ ವಿಜಯನ್ ಗೆ ಸೆಡ್ಡು ಹೊಡೆದಿರುವ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ.

ತಿರುವನಂತಪುರಂ: ಗಣರಾಜ್ಯೋತ್ಸವ ದಿನದಂದ ತ್ರಿವರ್ಣ ಧ್ವಜಾರೋಹಣ ಸಂಬಂಧ ಕೇರಳ ಸರ್ಕಾರ ಹೊರಡಿಸಿದ್ದ ಸುತ್ತೋಲೆಯ ಹೊರತಾಗಿಯೂ, ಸಿಎಂ ಪಿಣರಾಯಿ ವಿಜಯನ್ ಗೆ ಸೆಡ್ಡು ಹೊಡೆದಿರುವ ಆರ್ ಎಸ್ ಎಸ್  ಮುಖ್ಯಸ್ಥ ಮೋಹನ್ ಭಾಗ್ವತ್ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ.
ಕೇರಳದ ಪಾಲಕ್ಕಾಡ್ ನ ಖಾಸಗಿ ಶಾಲೆಯಲ್ಲಿ ಮೋಹನ್ ಭಾಗ್ವತ್ ಅವರು ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಈ ಹಿಂದೆ ಸ್ವತಂತ್ರ ದಿನಾಚರಣೆ ವೇಳೆ ಕೇರಳದಲ್ಲಿ ಮೋಹನ್ ಭಾಗ್ವಕ್ ಧ್ವಜಾರೋಹಣ ಮಾಡಿದ್ದಾಗ ಕೆಂಗಣ್ಣು  ಬೀರಿದ್ದ ಕೇರಳ ಸರ್ಕಾರ ಗಣೃರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವ ಗಣ್ಯರ ಕುರಿತು ಕೇರಳದ ಎಲ್ಲ ಶಾಲೆಗಳಿಗೆ ಸುತ್ತೋಲೆ ಹೊರಡಿಸಿತ್ತು. ಈ ಸುತ್ತೋಲೆ ಮೂಲಕ ಮೋಹನ್ ಭಾಗ್ವತ್ ರನ್ನು ಧ್ವಜಾರೋಹಣದಿಂದ  ದೂರವಿಡಲು ಕೇರಳ ಸರ್ಕಾರ ಮುಂದಾಗಿತ್ತು. 
ಆದರೆ ಕೇರಳ ಸರ್ಕಾರದ ಸುತ್ತೋಲೆಯನ್ನೂ ಮೀರಿ ಭಾಗ್ವತ್ ಕೇವಲ ಆರು ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಧ್ವಜಾರೋಹಣ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT