ಸಂವಿಧಾನ ರಕ್ಷಿಸಿ ಜಾಥಾ 
ದೇಶ

ಗಣರಾಜ್ಯೋತ್ಸವ ದಿನದಂದೇ 'ಸಂವಿಧಾನ ರಕ್ಷಿಸಿ' ಜಾಥಾ, ಮುಂಬೈನಲ್ಲಿ ಪ್ರತಿಪಕ್ಷ ನಾಯಕರ ಸಭೆ

'ಸಂವಿಧಾನ ರಕ್ಷಿಸಿ' ಜಾಥಾ ಹಿನ್ನೆಲೆಯಲ್ಲಿ 69ನೇ ಗಣರಾಜ್ಯೋತ್ಸವ ದಿನದಂದೇ ಪ್ರತಿಪಕ್ಷಗಳ ನಾಯಕರಾದ ಶರದ್ ಪವಾರ್, ಶರದ್ ಯಾದವ್, ಡಿ ರಾಜಾ, ಹಾರ್ದಿಕ್ ....

ಮುಂಬೈ: 'ಸಂವಿಧಾನ ರಕ್ಷಿಸಿ' ಜಾಥಾ ಹಿನ್ನೆಲೆಯಲ್ಲಿ 69ನೇ ಗಣರಾಜ್ಯೋತ್ಸವ ದಿನದಂದೇ ಪ್ರತಿಪಕ್ಷಗಳ ನಾಯಕರಾದ ಶರದ್ ಪವಾರ್, ಶರದ್ ಯಾದವ್, ಒಮರ್ ಅಬ್ದುಲ್ಲಾ, ಡಿ ರಾಜಾ, ಹಾರ್ದಿಕ್ ಪಟೇಲ್ ಮತ್ತು ಸುಶಿಲ್ ಕುಮಾರ್ ಶಿಂಧೆ ಅವರು ಶುಕ್ರವಾರ ಮುಂಬೈನಲ್ಲಿ ಸಭೆ ನಡೆಸಿದರು.
ಇಂದು ದಕ್ಷಿಣ ಮುಂಬೈನಲ್ಲಿರುವ ಮಹಾರಾಷ್ಟ್ರ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿ ಪಾಟೀಲ್ ಅವರ ಅಧಿಕೃತ ನಿವಾಸದಲ್ಲಿ ಪ್ರತಿಪಕ್ಷ ನಾಯಕರು ಸಭೆ ನಡೆಸಿದರು. ಸಭೆಯಲ್ಲಿ ಎನ್ ಸಿಪಿ ನಾಯಕರಾದ ನಾಯಕರಾದ ಪ್ರಫುಲ್ ಪಟೇಲ್, ಡಿ.ಪಿ.ತ್ರಿಪಾಠಿ ಹಾಗು ಮಾಜಿ ಸಂಸದ ರಾಮ್ ಜೇಠ್ಮಲಾನಿ ಸಭೆಯಲ್ಲಿ ಭಾಗವಹಿಸಿದ್ದರು. ತೃಣಮೂಲ ಕಾಂಗ್ರೆಸ್ ಪರವಾಗಿ ಮಾಜಿ ರೈಲ್ವೆ ಸಚಿವ ತ್ರಿವೇದಿ ಅವರು ಭಾಗವಹಿಸಿದ್ದರು. 
ಸಂವಿಧಾನ ರಕ್ಷಿಸಿ ಜಾಥಾದಂಗವಾಗಿ ಬಿಜೆಪಿ ವಿರುದ್ಧ ಹಲವು ರಾಜಕೀಯ ಪಕ್ಷಗಳು ಒಂದಾಗಿ ಇಂದು ಒಗ್ಗಟ್ಟು ಪ್ರದರ್ಶಿಸಿದ್ದು, ಮುಂಬೈ ವಿಶ್ವವಿದ್ಯಾಲಯ ಸಮೀಪ ಇರುವ ಡಾ.ಬಿಆರ್ ಅಂಬೇಡ್ಕರ್ ಪ್ರತಿಮೆಯಿಂದ ಗೇಟ್ ವೇ ಆಫ್ ಇಂಡಿಯಾ ವರೆಗೆ ಸಂವಿಧಾನ ರಕ್ಷಿಸಿ ಜಾಥಾ ನಡೆಸುತ್ತಿದ್ದಾರೆ.
ಪ್ರತಿಪಕ್ಷಗಳ ಸಂವಿಧಾನ ರಕ್ಷಿಸಿ ಜಾಥಾಗೆ ಪ್ರತಿಯಾಗಿ ಮಹಾರಾಷ್ಟ್ರ ಬಿಜೆಪಿ ಘಟಕ ಇಂದು ಮುಂಬೈನಲ್ಲಿ ತಿರಂಗಾ ಯಾತ್ರೆಯನ್ನು ಹಮ್ಮಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT