ದೇಶ

ಆರ್ಥಿಕ ಸಮೀಕ್ಷೆ ಮುಖಪುಟ ಪಿಂಕ್ ಬಣ್ಣಕ್ಕೆ ಬದಲಾಗಿದ್ದು ಯಾಕೆ ಗೊತ್ತ!

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಸಂಸತ್ ನಲ್ಲಿ ಗುಲಾಬಿ ಬಣ್ಣವಿರುವ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು...

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಸಂಸತ್ ನಲ್ಲಿ ಗುಲಾಬಿ ಬಣ್ಣದ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಈ ಬಾರಿಯ ಆರ್ಥಿಕ ಸಮೀಕ್ಷೆಯ ಮುಖಪುಟದ ಬಣ್ಣ ಬದಲಾಗಿರುವುದಕ್ಕೆ ಇಲ್ಲಿದೆ ಕೆಲ ವಿಶೇಷ ಕಾರಣಗಳು. 
ಲಿಂಗಾನುಪಾತದ ಸರಾಸರಿಯಲ್ಲಿ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಕಡಿಮೆಯಿದ್ದು 63 ದಶಲಕ್ಷ ಮಹಿಳೆಯರ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಹಾಗೂ ಮಹಿಳಾ ಸಬಲೀಕರಣವನ್ನು ಬೆಂಬಲಿಸುವ ಸಲುವಾಗಿ ಈ ಬಾರಿಯ ಆರ್ಥಿಕ ಸಮೀಕ್ಷೆಯ ಮುಖಪುಟವನ್ನು ಪಿಂಕ್ ಬಣ್ಣಕ್ಕೆ ಬದಲಾಯಿಸಲಾಗಿದೆ.
ಭಾರತದಲ್ಲಿ ಗಂಡು-ಹೆಣ್ಣು ಅನುಪಾತದಲ್ಲಿ ಭಾರಿ ವ್ಯತ್ಯಾಸವಿದೆ. ನಮ್ಮ ದೇಶದಲ್ಲಿ ಇನ್ನು ಪುತ್ರ ವ್ಯಾಮೋಹ ಇದೆ. ಗಂಡು ಮಗುವೊಂದು ಇರಲೇಬೇಕು ಎಂಬುದು ಬಹುತೇಕ ಜನರ ಆಶಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 
ಭಾರತದಲ್ಲಿ ಗಂಡು ಸಂತಾನಕ್ಕಾಗಿ ಹಂಬಲಿಸುವವರ ಸಂಖ್ಯೆ ಕೋಟಿ ಕೋಟಿಗಳಲ್ಲಿದೆ. ಇದಕ್ಕಾಗಿ ಕೆಲವರು ಗಂಡು ಮಕ್ಕಳಾಗುವವರೆಗೂ ಪ್ರಯತ್ನ ಮುಂದುವರಿಸುತ್ತಿರುತ್ತಾರೆ. ಇನ್ನು ಕೆಲವರು ಮೊದಲ ಬಾರಿ ಗಂಡು ಮಗುವಾದ ಕೂಡಲೇ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಬಿಡುತ್ತಾರೆ. ಈ ರೀತಿಯ ವೈರುಧ್ಯಗಳಿಂದ ಗಂಡು-ಹೆಣ್ಣು ಅನುಪಾತದಲ್ಲಿ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಸಮೀಕ್ಷೆ ಹೇಳಿದೆ. 
ಇತ್ತೀಚಿನ ದಿನಗಳಲ್ಲಿ ಕೈಗೊಂಡಿರುವ ಆರ್ಥಿಕ ಸುಧಾರಣೆಗಳಿಂದಾಗಿ ಭಾರತ ಜಾಗತಿಕ ಮಟ್ಟದಲ್ಲಿ ಮೇಲ್ಮುಖಕ್ಕೇರಿದೆ. ವ್ಯವಹಾರ ನಡೆಸಲು ಭಾರತ ಅತ್ಯಂತ ಪ್ರಶಸ್ತ ದೇಶ ಎಂದು ಜಾಗತಿಕ ಮಟ್ಟದಲ್ಲಿಯೇ ಹೆಸರು ಪಡೆದುಕೊಂಡಿದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ. 
2005-2006ರಲ್ಲಿ ಶೇಕಡ 36ರಷ್ಟು ಮಹಿಳೆಯರು ಕೆಲಸ ಮಾಡುತ್ತಿದ್ದು ಇದೀಗ 2015-16ರಲ್ಲಿ ಶೇಕಡ 24ರಷ್ಟು ಮಹಿಳೆಯರು ಮಾತ್ರ ಕೆಲಸ ಮಾಡುತ್ತಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT