ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಗಲಭೆಯ ಚಿತ್ರ 
ದೇಶ

ಕಾಸ್ ಗಂಜ್ ಗಲಭೆ: ಉತ್ತರ ಪ್ರದೇಶ ಸರ್ಕಾರದ ವರದಿ ಕೇಳಿದ ಗೃಹ ಸಚಿವಾಲಯ

ಕಾಸ್ ಗಂಜ್ ನಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಉತ್ತರ ಪ್ರದೇಶ: ಕಾಸ್ ಗಂಜ್   ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಗಣರಾಜ್ಯೋತ್ಸವ ದಿನದಂದು ಕಾಸ್ ಗಂಜ್ ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದ. ಎರಡು ಬಸ್ಸು, ಕಾರು ಹಾಗೂ ಮೂರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

 ವಿಶ್ವ ಹಿಂದೂ ಪರಿಷತ್, ಹಿಂದೂ ಮಹಾಸಭಾ, ಮತ್ತು ಎಬಿವಿಪಿ ಸಹಯೋಗದಲ್ಲಿ ತಿರಾಂಗಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ಭುಗಿಲೆದ್ದಿತ್ತು.ಯಾತ್ರೆ ಕೊಟ್ವಾಲಿ ಪ್ರದೇಶ ತಲುಪುತ್ತಿದ್ದಂತೆ ಕೆಲ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿಯಿಂದ ಗುಪ್ತಾ ಎಂಬಾತ ಸಾವನ್ನಪ್ಪಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ 118 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT