ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಗಲಭೆಯ ಚಿತ್ರ 
ದೇಶ

ಕಾಸ್ ಗಂಜ್ ಗಲಭೆ: ಉತ್ತರ ಪ್ರದೇಶ ಸರ್ಕಾರದ ವರದಿ ಕೇಳಿದ ಗೃಹ ಸಚಿವಾಲಯ

ಕಾಸ್ ಗಂಜ್ ನಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಉತ್ತರ ಪ್ರದೇಶ: ಕಾಸ್ ಗಂಜ್   ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಗಣರಾಜ್ಯೋತ್ಸವ ದಿನದಂದು ಕಾಸ್ ಗಂಜ್ ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದ. ಎರಡು ಬಸ್ಸು, ಕಾರು ಹಾಗೂ ಮೂರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

 ವಿಶ್ವ ಹಿಂದೂ ಪರಿಷತ್, ಹಿಂದೂ ಮಹಾಸಭಾ, ಮತ್ತು ಎಬಿವಿಪಿ ಸಹಯೋಗದಲ್ಲಿ ತಿರಾಂಗಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ಭುಗಿಲೆದ್ದಿತ್ತು.ಯಾತ್ರೆ ಕೊಟ್ವಾಲಿ ಪ್ರದೇಶ ತಲುಪುತ್ತಿದ್ದಂತೆ ಕೆಲ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿಯಿಂದ ಗುಪ್ತಾ ಎಂಬಾತ ಸಾವನ್ನಪ್ಪಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ 118 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT