ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಗಲಭೆಯ ಚಿತ್ರ 
ದೇಶ

ಕಾಸ್ ಗಂಜ್ ಗಲಭೆ: ಉತ್ತರ ಪ್ರದೇಶ ಸರ್ಕಾರದ ವರದಿ ಕೇಳಿದ ಗೃಹ ಸಚಿವಾಲಯ

ಕಾಸ್ ಗಂಜ್ ನಲ್ಲಿನ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಉತ್ತರ ಪ್ರದೇಶ: ಕಾಸ್ ಗಂಜ್   ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಕೇಂದ್ರ ಗೃಹ ಸಚಿವಾಲಯ ಉತ್ತರ ಪ್ರದೇಶಸರ್ಕಾರಕ್ಕೆ ಸೂಚನೆ ನೀಡಿದೆ.

ಗಣರಾಜ್ಯೋತ್ಸವ ದಿನದಂದು ಕಾಸ್ ಗಂಜ್ ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಯುವಕನೋರ್ವ ಮೃತಪಟ್ಟಿದ್ದ. ಎರಡು ಬಸ್ಸು, ಕಾರು ಹಾಗೂ ಮೂರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

 ವಿಶ್ವ ಹಿಂದೂ ಪರಿಷತ್, ಹಿಂದೂ ಮಹಾಸಭಾ, ಮತ್ತು ಎಬಿವಿಪಿ ಸಹಯೋಗದಲ್ಲಿ ತಿರಾಂಗಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಗಲಭೆ ಭುಗಿಲೆದ್ದಿತ್ತು.ಯಾತ್ರೆ ಕೊಟ್ವಾಲಿ ಪ್ರದೇಶ ತಲುಪುತ್ತಿದ್ದಂತೆ ಕೆಲ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಗುಂಡಿನ ದಾಳಿಯಿಂದ ಗುಪ್ತಾ ಎಂಬಾತ ಸಾವನ್ನಪ್ಪಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ಸಂಬಂಧ 118 ಜನರನ್ನು ಬಂಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT