ನವದೆಹಲಿ: ಲಾಭದಾಯಕ ಹುದ್ದೆ ಹೊಂದಿದ್ದ ಆರೋಪದ ಮೇಲೆ 20 ಮಂದಿ ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿದ ಹಿಂದಿನ ವಾಸ್ತವ ಅಂಶವನ್ನು ಅಫಿಡವಿಟ್ಟಿನ ಮೂಲಕ ತಿಳಿಸುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ತಿಳಿಸಿದೆ.
ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನ ಮತ್ತು ಚಂದರ್ ಶೇಖರ್ ಅವರನ್ನೊಳಗೊಂಡ ನ್ಯಾಯಪೀಠ, ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ಚುನಾವಣಾ ಆಯೋಗ ಹೇಳಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಅವಕಾಶ ನೀಡಿದೆ.
ಆಪ್ ನ 20 ಮಂದಿ ಶಾಸಕರು ಸಂಸದೀಯ ಕಾರ್ಯದರ್ಶಿಗಳ ಹುದ್ದೆ ಹೊಂದಿರುವುದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಆಯೋಗದ ತೀರ್ಮಾನಕ್ಕೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿರುವುದರಿಂದ ತನ್ನ ಅಭಿಪ್ರಾಯಕ್ಕೆ ಬದ್ಧವಾಗಿದೆ ಎಂದು ಆಯೋಗ ಹೇಳಿದೆ.
ದೀರ್ಘ ವಿಚಾರಣೆ ನಂತರ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ. ಆ ಸಂದರ್ಭದಲ್ಲಿ ಅನರ್ಹಗೊಂಡ ಶಾಸಕರು ಚುನಾವಣಾ ಆಯೋಗಕ್ಕೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos