ರೋಹಿಂಗ್ಯ 
ದೇಶ

ಭಾರತ ನಿರಾಶ್ರಿತರ ರಾಜಧಾನಿ ಆಗುವುದು ಬೇಡ: ಸುಪ್ರೀಂಗೆ ಕೇಂದ್ರ ಪ್ರತಿಕ್ರಿಯೆ

ಭಾರತವು ನಿರಾಶ್ರಿತರ ರಾಜಧಾನಿ ಆಗುವುದು ಬೇಡ ಎಂದು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಕಳಕಳಿ ವ್ಯಕ್ತಪಡಿಸಿದೆ...

ನವದೆಹಲಿ: ಭಾರತವು ನಿರಾಶ್ರಿತರ ರಾಜಧಾನಿ ಆಗುವುದು ಬೇಡ ಎಂದು ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಕಳಕಳಿ ವ್ಯಕ್ತಪಡಿಸಿದೆ. 
ನೆರ ರಾಷ್ಟ್ರಗಳ ಜನರು ನಮ್ಮ ದೇಶಕ್ಕೆ ನುಗ್ಗುತ್ತಾರೆ. ಭಾರತವು ನಿರಾಶ್ರಿತರ ರಾಜಧಾನಿ ಆಗುವುದು ಬೇಡ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. 
ಗಡಿಯಲ್ಲಿ ಭದ್ರತಾ ಪಡೆಯ ಯೋಧರು ನೆರ ರಾಷ್ಟ್ರದವರನ್ನು ಹಿಂದಕ್ಕೆ ಕಳುಹಿಸುತ್ತಿದ್ದಾರೆ. ಮ್ಯಾನ್ಮಾರ್ ನಲ್ಲಿ ಕಿರುಕುಳದಿಂದ ತಪ್ಪಿಸಿಕೊಂಡವರು ಗಡಿಯಲ್ಲಿ ಮೆಣಸಿನ ಸ್ಪ್ರೇ ಹಾಗೂ ಸ್ಟನ್ ಗ್ರೆನೇಡ್ ದಾಳಿಯ ತೊಂದರೆಗೆ ಒಳಗಾಗಿರುವುದಾಗಿ ರೋಹಿಂಗ್ಯಾ ನಿರಾಶ್ರಿತರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಿದೆ. 
ರೋಹಿಂಗ್ಯಾ ನಿರಾಶ್ರಿತರು ಭಾರತದ ನಿರಾಶ್ರಿತರ ಶಿಬಿರಗಳಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದ್ದಾರೆ. ಶಾಲೆ ಅಥವಾ ಆಸ್ಪತ್ರೆಯಿಂದ ಈ ಜನರು ದೂರು ಉಳಿದಿದ್ದು ಪರಿಸ್ಥಿತಿ ಅಮಾನವೀಯವಾಗಿದೆ ಎಂದು ಅಡ್ವೋಕೇಟ್ ಪ್ರಶಾಂತ್ ಭೂಷಣ್ ನಿರಾಶ್ರಿತರ ಪರ ವಾದ ಮಂಡಿಸಿದರು. 
ರೋಹಿಂಗ್ಯಾ ನಿರಾಶ್ರಿತರು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಲು ಸಮಯ ನೀಡುವಂತೆ ತುಷಾರ್ ಮೆಹ್ತಾ ಸಮಯಾವಕಾಶ ಕೋರಿದ್ದು ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ನಿಗದಿಪಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT