ದೇಶದ ಮೊದಲ ಮಂಗಳಮುಖಿ ವಕೀಲೆಯಾದ ಸತ್ಯಶ್ರೀ ಶರ್ಮಿಳಾ 
ದೇಶ

ಸತ್ಯಶ್ರೀ ಶರ್ಮಿಳಾ: ದೇಶದ ಮೊಟ್ಟ ಮೊದಲ ತೃತೀಯ ಲಿಂಗಿ ವಕೀಲೆ

ಮುಖ್ಯವಾಹಿನಿಗೆ ಬರಲು ಹಿಂಜರಿಯುತ್ತಿದ್ದ ತೃತೀಯಲಿಂಗಿಗಳು ಅಥವಾ ಮಂಗಳಮುಖಿಯರು ಇತ್ತೀಚಿನ ದಿನಗಳಲ್ಲಿ ಮಾಡೆಲಿಂಗ್, ನಟಿ, ಎಸ್ಐ, ಸುದ್ದಿ ವಾಚಕಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಆರಂಭಿಸಿದ್ದು, ಇದೀಗ ವಕೀಲ ವೃತ್ತಿಗೂ ಪಾದಾರ್ಪಣೆ ಮಾಡಿದ್ದಾರೆ...

ಚೆನ್ನೈ: ಮುಖ್ಯವಾಹಿನಿಗೆ ಬರಲು ಹಿಂಜರಿಯುತ್ತಿದ್ದ ತೃತೀಯಲಿಂಗಿಗಳು ಅಥವಾ ಮಂಗಳಮುಖಿಯರು ಇತ್ತೀಚಿನ ದಿನಗಳಲ್ಲಿ ಮಾಡೆಲಿಂಗ್, ನಟಿ, ಎಸ್ಐ, ಸುದ್ದಿ ವಾಚಕಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೆ ಲಗ್ಗೆ ಇಡಲು ಆರಂಭಿಸಿದ್ದು,  ಇದೀಗ ವಕೀಲ ವೃತ್ತಿಗೂ ಪಾದಾರ್ಪಣೆ ಮಾಡಿದ್ದಾರೆ.
ತೃತೀಯ ಲಿಂಗಿಯೊಬ್ಬರು ವಕೀಲೆಯಾಗುವ ಮೂಲಕ ದೇಶದ ಮೊದಲ ಮಂಗಳಮುಖಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 
ಚೆನ್ನೈ ಮೂಲದ ಸತ್ಯಶ್ರೀ ಶರ್ಮಿಳಾ ಎಂಬುವವರು ದೇಶದ ಮೊದಲ ತೃತೀಯಲಿಂಗಿ
ವಕೀಲೆಯಾಗಿದ್ದಾರೆ. 
ಪಾಂಡಿಚೇರಿ ಹಾಗೂ ತಮಿಳುನಾಡು ರಾಜ್ಯಗಳ ಬಾರ್ ಕೌನ್ಸಿಲ್ ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದ ಸತ್ಯಶ್ರೀ ಅವರು, ಸಾಕಷ್ಟು ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಿದ ಬಳಿಕ ಕೊನೆಗೂ ವಕೀಲೆಯಾಗಿದ್ದಾರೆ. 
ತಮ್ಮ ಸಮುದಾಯದವರ ಸಹಕಾರ, ಬೆಂಬಲದೊಂದಿಗೆ ಸಮಾಜದಲ್ಲಿ ಮೇಲೆ ಬಂದ ಸತ್ಯಶ್ರೀಯವರು ಮುಂದೆ ತಮ್ಮ ಸಮಾಜ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ಆಸೆಯನ್ನು ಹೊಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT