ಸಂಗ್ರಹ ಚಿತ್ರ 
ದೇಶ

'ಭಾರತೀಯ ಸೇನೆ ಲಾಹೋರ್ ಗೂ ನುಗ್ಗಿ ಹೊಡೆದುರುಳಿಸಬಲ್ಲದು ಎಂಬುದು ಸರ್ಜಿಕಲ್ ದಾಳಿಯಿಂದ ಸಾಬೀತು

ಭಾರತೀಯ ಸೇನೆ ಕೇವಲ ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲ, ಲಾಹೋರ್ ಗೂ ನುಗ್ಗಿ ತನ್ನ ಶುತೃಗಳನ್ನು ಹೊಡೆದುರುಳಿಸಬಲ್ಲದು ಎಂಬುದು ಸರ್ಜಿಕಲ್ ದಾಳಿಯಿಂದ ಸಾಬೀತಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಹೇಳಿದೆ.

ನವದೆಹಲಿ: ಭಾರತೀಯ ಸೇನೆ ಕೇವಲ ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲ, ಲಾಹೋರ್ ಗೂ ನುಗ್ಗಿ ತನ್ನ ಶುತೃಗಳನ್ನು ಹೊಡೆದುರುಳಿಸಬಲ್ಲದು ಎಂಬುದು ಸರ್ಜಿಕಲ್ ದಾಳಿಯಿಂದ ಸಾಬೀತಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ಎಸ್) ಹೇಳಿದೆ.
ಈ ಬಗ್ಗೆ ಮಾತನಾಡಿರುವ ಆರ್ ಎಸ್ ಎಸ್ ನ ಮುಖಂಡ ಇಂದ್ರೇಶ್ ಕುಮಾರ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಭಾರತೀಯ ಸೇನೆ ಲಾಹೋರ್ ಗೂ ನುಗ್ಗಿ ತನ್ನ ಶುತೃಗಳನ್ನು ಹೊಡೆದುರುಳಿಸಬಲ್ಲದು ಎಂಬ ಸಂದೇಶವನ್ನು ಸರ್ಜಿಕಲ್ ದಾಳಿಯಿಂದ ನೀಡಿದೆ ಎಂದು ಹೇಳಿದ್ದಾರೆ. ಭಾರತ ಇಚ್ಛಿಸಿದರೆ, ಪಾಕಿಸ್ತಾನದ ಯಾವುದೇ ಮೂಲೆಗೂ ನುಗ್ಗಿ ಉಗ್ರರನ್ನು ಮಟ್ಟ ಹಾಕುತ್ತದೆ. ಆ ಸಾಮರ್ಥ್ಯ ಭಾರತೀಯ ಸೇನೆಗೆ ಇದೆ ಎಂದು ಹೇಳಿದರು.
ಅಂತೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದ ವೇಳೆ ಸುಮಾರು 300ಕ್ಕೂ ಅಧಿಕ ಉಗ್ರರನ್ನು ಹೊಡೆದುರುಳಿಸಲಾಗಿದೆ. ಇದು ಈ ಹಿಂದಿನ ಯಾವುದೇ ಸರ್ಕಾರ ಮಾಡಿರದ ಸಾಧನೆಯಾಗಿದೆ.  ಕಾಶ್ಮೀರದಲ್ಲಿ ಕೆಲ ಯೋಜನೆಗ ಗುರಿ ಸಾಧಿಸಲು ಪಿಡಿಪಿಯೊಂದಿಗೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದೆವು. ಗುರಿ ಸಾಧನೆ ಬಳಿಕ ಸರ್ಕಾರದಿಂದ ಹೊರ ಬಂದೆವು, ಕಾಶ್ಮೀರದ ಹಿತಾಸಕ್ತಿ ದೃಷ್ಟಿಯಿಂದ ಅಧಿಕಾರ ತ್ಯಾಗ ಮಾಡಿದೆವು.
ಕಾಶ್ಮೀರದಲ್ಲಿ ಉಗ್ರರ ಪ್ರಮುಖ ನೆಲೆಗಳನ್ನು ಶಾಶ್ವತವಾಗಿ ನಿರ್ನಾಮ ಮಾಡುವುದು, ಸೇನೆಗೆ ಆತ್ಮಸ್ಥೈರ್ಯ ತುಂಬುವುದು, ಉಗ್ರರ ವಿರುದ್ಧ ಕಾರ್ಯಾಚರಣೆ ಎನ್ ಐಎ, ಗುಪ್ತಚರ ಇಲಾಖೆಗಳಿಗೆ ಶಕ್ತಿ ತುಂಬುವುದು ನಮ್ಮ ಗುರಿಯಾಗಿತ್ತು. ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ವ್ಯಕ್ತಿಗಳ ಮಟ್ಟಹಾಕಬೇಕಿತ್ತು. ಈ ಎಲ್ಲ ಕಾರ್ಯಗಳು ಪೂರ್ಣವಾದ ಹಿನ್ನಲೆಯಲ್ಲಿ ಸರ್ಕಾರದಿಂದ ಹೊರಬಂದು ಅಧಿಕಾರ ತ್ಯಾಗ ಮಾಡಿದೆವು ಎಂದು ಹೇಳಿದ್ದಾರೆ. 
ಅಂತೆಯೇ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿರುವ ಅವರು ಭಾರತದ ಅಖಂಡ ಭಾರತ (ಪಾಕಿಸ್ತಾನವನ್ನೂ ಒಳಗೊಂಡಂತೆ) ಪರಿಕಲ್ಪನೆ ಯಾವಾಗ ಬೇಕಾದರೂ ನನಸಾಗಬಹುದು ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT