ಹೈದರಾಬಾದ್; ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಹೈದರಾಬಾದ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ. ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೈದರಾಬಾದ್'ಗೆ ತೆರಳಿದ್ದ ದೇವೇಗೌಡ ಅವರು, ಟಿಆರ್'ಎಸ್ ಮುಖ್ಯಸ್ಥರೂ ಆಗಿರುವ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿದ್ದಾರೆ.
ಇದೊಂದು ಸೌಜನ್ಯ ಭೇಟಿ ಎಂದು ಮೂಲಗಳು ಹೇಳುತ್ತಿವೆ. ಆದರೂ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಫೆಡರಲ್ ಫ್ರಂಟ್ ರಚನೆ ಕುರಿತಂತೆ ಇಬ್ಬರೂ ನಾಯಕರ ನಡುವೆ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚನೆ ಬಗ್ಗೆ ಮಾತುಕತೆಗಾಗಿ ಕೆಸಿಆರ್ ಏಪ್ರಿಲ್'ನಲ್ಲಿ ಗೌಡರನ್ನು ಭೇಟಿಯಾಗಿದ್ದರು.