ಅಭಿಷೇಕ್ ಮನು ಸಿಂಘ್ವಿ 
ದೇಶ

ಮೋದಿ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಅರಾಜಕತೆ ತಾಂಡವ- ಕಾಂಗ್ರೆಸ್

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಅರಾಜಕತೆ ತಾಂಡವವಾಡುತ್ತಿದ್ದು, ಜಂಗಲ್ ರಾಜ್ ನರೇಂದ್ರಮೋದಿ ಅವರ ನವ ಭಾರತದ ಹೊಸ ಚಿಹ್ನೆಯಾಗಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನವದೆಹಲಿ:ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಅರಾಜಕತೆ ತಾಂಡವವಾಡುತ್ತಿದ್ದು,  ಜಂಗಲ್ ರಾಜ್  ನರೇಂದ್ರಮೋದಿ ಅವರ ನವ ಭಾರತದ ಹೊಸ  ಚಿಹ್ನೆಯಾಗಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಒಂದು ತಿಂಗಳ ಅವಧಿಯಲ್ಲಿ ದೇಶಾದ್ಯಂತ 28 ಕೊಲೆಗಳು ನಡೆದಿವೆ. ಪ್ರತಿದಿನ ಒಂದೊಂದು ಕೊಲೆಯಾಗುತ್ತಿದೆ. ಸ್ವಾತಂತ್ರ್ಯ ನಂತರದ 70 ವರ್ಷಗಳಲ್ಲಿ ಇಂತಹ  ಸ್ಥಿತಿಯನ್ನು ದೇಶ ಕಂಡಿರಲಿಲ್ಲ ಎಂದು  ಕಾಂಗ್ರೆಸ್ ವಕ್ತಾರ  ಅಭಿಷೇಕ್ ಮನು ಸಿಂಘ್ವಿ ಅಪಾದಿಸಿದ್ದಾರೆ.

ದೇಶಾದ್ಯಂತ ಕಾನೂನು ಸುವ್ಯವಸ್ಥೆ ಕುಸಿತಗೊಂಡಿದ್ದು, ಅರಾಜಕತೆ  ತಾಂಡವವಾಡುತ್ತಿದೆ. ಸಾಮಾಜಿಕ ಜಾಲ ತಾಣಗಳ ಮೂಲಕ ವದಂತಿಗಳು ಹರಡಿ ಅನೇಕ ಮುಗ್ದ ಜನರ ಕೊಲೆಯಾಗುತ್ತಿದೆ.
ಕಳೆದ ನಾಲ್ಕು ವರ್ಷಗಳ ಆಳ್ವಿಕೆಯಲ್ಲಿ  ನಮ್ಮ ಸಾಮಾಜಿಕ , ರಾಜಕೀಯ ಶಬ್ದಕೋಶದಲ್ಲಿ ಲೈಂಚಿಂಗ್ ಎಂಬ  ಹೊಸ ಶಬ್ದವನ್ನು ಸೇರಿಸಿದೆ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT