ನವದೆಹಲಿ: ನಾನು ಶಹೆನ್ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ ನನಗೆ ಮತ್ತಷ್ಟು ಶಕ್ತಿ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
'ಸ್ವರಾಜ್ಯ' ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮತ್ತು ರೋಡ್ ಶೋ ನಡೆಸಬಾರದು ಎಂಬ ಬಗ್ಗೆ ಪ್ರತಿಕ್ರಿಯೆಸಿದ ಪ್ರಧಾನಿ ಮೋದಿ ಅವರು, ರಸ್ತೆಯಲ್ಲಿ ಜನ ನನ್ನ ಸ್ವಾಗತಿಸಲು ಮತ್ತು ಶುಭಾಶಯ ಕೋರಲು ಕಾಯುತ್ತಿದ್ದರೆ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಆಗುವುದಿಲ್ಲ ಎಂದರು.
ನಾನು ಶಹೆನ್ಶಾಹ್ ಅಥವಾ ಚಕ್ರವರ್ತಿ ಅಲ್ಲ, ಜನರೊಂದಿಗೆ ಬೆರೆತರೆ ಮತ್ತಷ್ಟು ಶಕ್ತಿ ಬರುತ್ತದೆ. ನಾನು ಪ್ರಯಾಣ ಮಾಡಬೇಕಾದರೆ ರಸ್ತೆಯಲ್ಲಿ ಎಲ್ಲಾ ವಯೋಮಾನದ ನೂರಾರು ಜನರನ್ನು ನೋಡುತ್ತೇನೆ. ಅವರೆಲ್ಲರೂ ನನಗೆ ಶುಭಾಶಯ ಕೋರಲು ಮತ್ತು ಸ್ವಾಗತಿಸಲು ಬಂದಿರುತ್ತಾರೆ. ಅವರ ಪ್ರೀತಿ ಮತ್ತು ಹಾರೈಕೆಯನ್ನು ನೋಡಿಯೂ ನಾನು ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ನಕ್ಸಲರಿಂದ ಜೀವ ಬೇದರಿಕೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇತ್ತೀಚಿಗೆ ಗೃಹ ಸಚಿವಾಲಯ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಸಾರ್ವಜನಿಕ ರ್ಯಾಲಿ ನಡೆಸದಂತೆ ಪ್ರಧಾನಿಗೆ ಸಲಹೆ ನೀಡಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos