ಪಿಯೂಷ್ ಗೋಯಲ್ 
ದೇಶ

ಮುಂಬೈ ಸೇತುವೆ ಕುಸಿತ : ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ

ಭಾರೀ ಮಳೆಯಿಂದ ಮಹಾರಾಷ್ಟ್ರದ ಅಂದೇರಿ ಪಶ್ಚಿಮ ನಿಲ್ದಾಣದಲ್ಲಿನ ರಸ್ತೆ ಮೇಲ್ಸುತುವೆ ಕುಸಿತ ಪ್ರಕರಣವನ್ನು ತನಿಖೆಗೆ ಆದೇಶಿಸಿರುವ ರೈಲ್ವೆ ಸಚಿವ ಪಿಯೂಷ್ ಗೊಯಲ್, ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಮುಂಬೈ: ಭಾರೀ ಮಳೆಯಿಂದ ಮಹಾರಾಷ್ಟ್ರದ ಅಂದೇರಿ ಪಶ್ಚಿಮ ನಿಲ್ದಾಣದಲ್ಲಿನ  ರಸ್ತೆ ಮೇಲ್ಸುತುವೆ   ಕುಸಿತ ಪ್ರಕರಣವನ್ನು ತನಿಖೆಗೆ ಆದೇಶಿಸಿರುವ  ರೈಲ್ವೆ ಸಚಿವ ಪಿಯೂಷ್ ಗೊಯಲ್, ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಇದೊಂದು ದುರದೃಷ್ಟಕರ  ಘಟನೆಯಾಗಿದೆ.  15 ದಿನಗಳೊಳಗೆ ತನಿಖಾ ವರದಿ ನೀಡುವಂತೆ  ರೈಲ್ವೆ ಸುರಕ್ಷತಾ  ಆಯುಕ್ತರಿಗೆ ಆದೇಶಿಸಲಾಗಿದೆ. ಗಾಯಗೊಂಡಿರುವ ಐವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅವರ  ಚಿಕಿತ್ಸಾ ವೆಚ್ಚವನ್ನು  ರೈಲ್ವೆ  ಇಲಾಖೆಯೇ ವಹಿಸಲಿದೆ ಎಂದು ಅವರು ಹೇಳಿದರು.
ಅಂದೇರಿ ಪೂರ್ವ ಹಾಗೂ ಪಶ್ಟಿಮ ನಿಲ್ದಾಣ ಸಂಪರ್ಕಿಸುವ ಗೋಖಲೆ ಸೇತುವೆ ಕುಸಿದು ಸಂಚಾರ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗಿತ್ತು.ತೆರವು ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹಾರ್ಬರ್ ಲೈನ್   ಹಳಿ ಸುಗಮಗೊಂಡಿದೆ ಎಂದು ಪಶ್ಚಿಮ ರೈಲ್ವೆ  ಮಾಹಿತಿ ನೀಡಿದೆ. ಈ ಮಧ್ಯೆ ಉಳಿದಿರುವ ಎಲ್ಲಾ ವಿಭಾಗಗಳ ಕೆಲಸಗಳು ಪೂರ್ಣಗೊಂಡಿವೆ.
ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಂಬೈ ಪೊಲೀಸ್ ಆಯುಕ್ತ  ಸುಬೋದ್ ಜೈಸ್ವಾಲ್  ಅವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೂಚನೆ ನೀಡಿದ್ದಾರೆ.
ಈ ಮಧ್ಯೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಆಗ್ಗಾಗ್ಗೆ ಬಸ್ ಗಳ ಸಂಚಾರವನ್ನು ಹೆಚ್ಚಿಸುವಂತೆಯೂ ಫಡ್ನವೀಸ್  ಬೃಹನ್ ಮುಂಬೈ ಮಹಾನರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT