ಮುಖ್ಯಮಂತ್ರಿ ಅಮರಿಂದರ್ ಸಿಂಗ್ 
ದೇಶ

ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ , ಅಮರಿಂದರ್ ಕೇಂದ್ರಕ್ಕೆ ಶಿಫಾರಸ್ಸು

ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ ಶಿಕ್ಷೆಗೊಳಪಡಿಸುವಂತೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಶಿಫಾರಸ್ಸು ಮಾಡಿ ಪತ್ರ ಬರೆದಿದ್ದಾರೆ.

ಅಮೃತಸರ :  ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ ಶಿಕ್ಷೆಗೊಳಪಡಿಸುವಂತೆ ಪಂಜಾಬ್ ಮುಖ್ಯಮಂತ್ರಿ  ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್   ಅವರಿಗೆ ಶಿಫಾರಸ್ಸು ಮಾಡಿ ಪತ್ರ ಬರೆದಿದ್ದಾರೆ.

1985ರ ನಾರ್ಕಟಿಕ್  ಡ್ರಗ್ಸ್ ಅಂಡ್ ಸೈಕೊಟ್ರೊಪಿಕ್  ಸಬ್ ಟೆನ್ಸ್ ಕಾಯ್ದೆಗೆ  ತಿದ್ದುಪಡಿ ಪ್ರಕ್ರಿಯೆ ಸಂಬಂಧ ಕೇಂದ್ರಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ  ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅಮರಿಂದರ್ ಸಿಂಗ್ ಈ ರೀತಿಯ ಶಿಫಾರಸ್ಸು ಮಾಡಿದ್ದಾರೆ.

ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ  ಅಮರಿಂದರ್ ಸಿಂಗ್ ಕೇಂದ್ರಸರ್ಕಾರವನ್ನು  ಒತ್ತಾಯಿಸಿದ್ದಾರೆ. ಕೆಲವು ಅಪರಾಧಗಳನ್ನು ಎರಡು ಬಾರಿ ಮಾಡಿದ್ದರೆ ಅಂತಹುಗಳಿಗೆ ಎನ್ ಡಿಪಿಎಸ್ ಕಾಯ್ದೆ ಪ್ರಕಾರ  ಮರಣ ದಂಡನೆ ವಿಧಿಸಲು ಅವಕಾಶ ಇರುವುದಾಗಿ  ಅಮರಿಂದರ್ ಸಿಂಗ್ ಗಮನ ಸೆಳೆದಿದ್ದಾರೆ.

ಮಾದಕ ದ್ರವ್ಯ ಮಾರಾಟ  ರಾಜ್ಯದ  ಸಾಮಾಜಿಕ ಆರ್ಥಿಕ ಅಭಿವೃದ್ದಿಗೆ ಪ್ರಮುಖ ತೊಡಕಾಗಿ ಪರಿಣಮಿಸಿದ್ದು, ಸಮಾಜ ಹಾಗೂ ಯುವಕರ ಭವಿಷ್ಯ ಹಾಳು ಮಾಡುವ ಇಂತಹ ಅಪರಾಧ ಚಟುವಟಿಕೆಗಳಿಂದ ದೂರ ಇರಲು ಮರಣ ದಂಡನೆ  ಶಿಕ್ಷೆ ಜಾರಿಯಾಗಬೇಕು ಎಂದು ಅವರು  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT