ಮುಖ್ಯಮಂತ್ರಿ ಅಮರಿಂದರ್ ಸಿಂಗ್ 
ದೇಶ

ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ , ಅಮರಿಂದರ್ ಕೇಂದ್ರಕ್ಕೆ ಶಿಫಾರಸ್ಸು

ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ ಶಿಕ್ಷೆಗೊಳಪಡಿಸುವಂತೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಶಿಫಾರಸ್ಸು ಮಾಡಿ ಪತ್ರ ಬರೆದಿದ್ದಾರೆ.

ಅಮೃತಸರ :  ಮಾದಕ ದ್ರವ್ಯ ಮಾರಾಟಗಾರರಿಗೆ ಮರಣ ದಂಡನೆ ಶಿಕ್ಷೆಗೊಳಪಡಿಸುವಂತೆ ಪಂಜಾಬ್ ಮುಖ್ಯಮಂತ್ರಿ  ಕ್ಯಾಪ್ಟನ್ ಅಮರಿಂದರ್ ಸಿಂಗ್, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್   ಅವರಿಗೆ ಶಿಫಾರಸ್ಸು ಮಾಡಿ ಪತ್ರ ಬರೆದಿದ್ದಾರೆ.

1985ರ ನಾರ್ಕಟಿಕ್  ಡ್ರಗ್ಸ್ ಅಂಡ್ ಸೈಕೊಟ್ರೊಪಿಕ್  ಸಬ್ ಟೆನ್ಸ್ ಕಾಯ್ದೆಗೆ  ತಿದ್ದುಪಡಿ ಪ್ರಕ್ರಿಯೆ ಸಂಬಂಧ ಕೇಂದ್ರಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ  ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಅಮರಿಂದರ್ ಸಿಂಗ್ ಈ ರೀತಿಯ ಶಿಫಾರಸ್ಸು ಮಾಡಿದ್ದಾರೆ.

ಅಪರಾಧಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ  ಅಮರಿಂದರ್ ಸಿಂಗ್ ಕೇಂದ್ರಸರ್ಕಾರವನ್ನು  ಒತ್ತಾಯಿಸಿದ್ದಾರೆ. ಕೆಲವು ಅಪರಾಧಗಳನ್ನು ಎರಡು ಬಾರಿ ಮಾಡಿದ್ದರೆ ಅಂತಹುಗಳಿಗೆ ಎನ್ ಡಿಪಿಎಸ್ ಕಾಯ್ದೆ ಪ್ರಕಾರ  ಮರಣ ದಂಡನೆ ವಿಧಿಸಲು ಅವಕಾಶ ಇರುವುದಾಗಿ  ಅಮರಿಂದರ್ ಸಿಂಗ್ ಗಮನ ಸೆಳೆದಿದ್ದಾರೆ.

ಮಾದಕ ದ್ರವ್ಯ ಮಾರಾಟ  ರಾಜ್ಯದ  ಸಾಮಾಜಿಕ ಆರ್ಥಿಕ ಅಭಿವೃದ್ದಿಗೆ ಪ್ರಮುಖ ತೊಡಕಾಗಿ ಪರಿಣಮಿಸಿದ್ದು, ಸಮಾಜ ಹಾಗೂ ಯುವಕರ ಭವಿಷ್ಯ ಹಾಳು ಮಾಡುವ ಇಂತಹ ಅಪರಾಧ ಚಟುವಟಿಕೆಗಳಿಂದ ದೂರ ಇರಲು ಮರಣ ದಂಡನೆ  ಶಿಕ್ಷೆ ಜಾರಿಯಾಗಬೇಕು ಎಂದು ಅವರು  ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kogilu layout Demolition: ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಸೂರು ಕಲ್ಪಿಸಿಕೊಡಲಾಗುವುದು; ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ: ತಿಮ್ಮಪ್ಪನ ದರ್ಶನಕ್ಕೆ ದೇವಸ್ಥಾನಗಳಲ್ಲಿ ಭಕ್ತ ಸಾಗರ; ಹಲವೆಡೆ ವಾಹನ ಸಂಚಾರ ನಿರ್ಬಂಧ

ತೀವ್ರ ಚಳಿ ಎಂದು ಕ್ಯಾಬ್ ನಲ್ಲೇ ಮಲಗಿದ ಚಾಲಕ, ಅಲ್ಲೇ ಸಾವು.. ಕಾರಣ ಏನು ಗೊತ್ತಾ?

ಕ್ಷಮಿಸುಬಿಡು ಅಮ್ಮಾ...: ನಟಿ ನಂದಿನಿ ಆತ್ಮಹತ್ಯೆ; ಡೆತ್‌ ನೋಟ್‌ ಸೀಕ್ರೆಟ್‌ ಬಹಿರಂಗ!

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

SCROLL FOR NEXT