ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ಆಯ್ತು, ಈಗ ತ್ರಿಪುರಾ ಸರದಿ: ಬಿಜೆಪಿ ಕೈ ಬಿಟ್ಟ ಐಪಿಎಫ್ ಟಿ, ಲೋಕಸಭೆಗೆ ಏಕಾಂಗಿ ಸ್ಪರ್ಧೆ

ಕಾಶ್ಮೀರದಲ್ಲಿ ಪಿಡಿಪಿಗೆ ಕೈ ಕೊಟ್ಟಿದ್ದ ಬಿಜೆಪಿಗೆ ಇದೀಗ ತ್ರಿಪುರಾದಲ್ಲಿ ದೊಡ್ಡ ಶಾಕ್ ಎದುರಾಗಿದ್ದು, ಅಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿರುವ ಐಪಿಎಫ್ ಟಿ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

ಅಗರ್ತಲಾ: ಕಾಶ್ಮೀರದಲ್ಲಿ ಪಿಡಿಪಿಗೆ ಕೈ ಕೊಟ್ಟಿದ್ದ ಬಿಜೆಪಿಗೆ ಇದೀಗ ತ್ರಿಪುರಾದಲ್ಲಿ ದೊಡ್ಡ ಶಾಕ್ ಎದುರಾಗಿದ್ದು, ಅಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿರುವ ಐಪಿಎಫ್ ಟಿ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.
2019ರ ಲೋಕಸಭಾ ಚುನಾವಣೆಯ ನಿಮಿತ್ತ ಸೀಟು ಹಂಚಿಕೆ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಇದೇ ಕಾರಣಕ್ಕೆ ಐಪಿಎಫ್ ಟಿ ತಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದೆ. 
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಐಪಿಎಫ್ ಟಿ ವಕ್ತರಾರು, ತ್ರಿಪುರಾದಲ್ಲಿರುವ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ತನ್ನ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವಂತೆ ಒತ್ತಡ ಹೇರಿತ್ತು. ಇದು ರಾಜ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಅಪಾಯವಿದ್ದು, ಇದೇ ಕಾರಣಕ್ಕೆ ತಾವು ಬಿಜೆಪಿ ನಿರ್ಧಾರವನ್ನು ವಿರೋಧಿಸುತ್ತಿದ್ದೇವೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾನು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಕಳೆದ ಜನವರಿಯಲ್ಲಿ ನಡೆದ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಐಪಿಎಫ್ ಟಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಇದಕ್ಕೂ ಮೊದಲು ಸುಮಾರು 25 ವರ್ಷಗಳ ಕಾಲ ಎಡಪಕ್ಷ ಮೈತ್ರಿಕೂಟದಲ್ಲಿದ್ದ ಐಪಿಎಫ್ ಟಿ ಸರ್ಕಾರ ರಚನೆ ವೇಳೆ ಬಿಜೆಪಿ ಜೊತೆ ಕೈ ಜೋಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!